ಛತ್ತೀಸ್ಗಢ: ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಅದನ್ನು ‘ಮೋದಿ ಕಿ ಗ್ಯಾರಂಟಿ 2023’ ಎಂದು ಕರೆಯಲಾಗಿದೆ. ರಾಯ್ಪುರದ ಬಿಜೆಪಿ ಕಚೇರಿಯ ಕುಶಾಭೌ ಠಾಕ್ರೆ ಸಂಕೀರ್ಣದಲ್ಲಿ ಗೃಹ ಸಚಿವ ಅಮಿತ್ ಶಾ ಬಿಜೆಪಿಯ ನಿರ್ಣಯ ಪತ್ರವನ್ನು ಬಿಡುಗಡೆ ಮಾಡಿದರು.
‘ಮೋದಿ ಕಿ ಗ್ಯಾರಂಟಿ 2023’ ಎಂಬ ಶೀರ್ಷಿಕೆಯ ಪ್ರಣಾಳಿಕೆಯಲ್ಲಿ ಛತ್ತೀಸ್ಗಢದ ಜನರಿಗೆ ಬಿಜೆಪಿ ನೀಡಿರುವ ಕೆಲವು ಪ್ರಮುಖ ಭರವಸೆಗಳನ್ನು ನೀಡಿದ ಶಾ, “ಛತ್ತೀಸ್ಗಢದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಕೃಷಿ ಉನ್ನತಿ ಯೋಜನೆಯನ್ನು ಪ್ರಾರಂಭಿ ಸಲಾಗುವುದು, ಇದರ ಭಾಗವಾಗಿ ರೂ.3,100ರೂ ದರಲಲ್ಲಿ 21 ಕ್ವಿಂಟಾಲ್ ಅಥವಾ ಎಕರೆ ಭತ್ತವನ್ನು ಖರೀದಿಸುತ್ತೇವೆ. ಖರೀದಿಯಿಂದ ಸಂಗ್ರಹಿಸಿದ ಮೊತ್ತವನ್ನು ರೈತರಿಗೆ ವರ್ಗಾಯಿಸಲಾಗುವುದು ಎಂದು ತಿಳಿಸಿದರು.
“ಸರ್ಕಾರಿ ಕಚೇರಿಗಳಲ್ಲಿ ಖಾಲಿಯಿರುವ ಒಂದು ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು, ಎಲ್ಲಾ ವಿವಾಹಿತ ಮಹಿಳೆಯರಿಗೆ ವರ್ಷಕ್ಕೆ 12,000 ರೂಗಳನ್ನು ನೀಡಲಾಗುವುದು, ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 18 ಲಕ್ಷ ಮನೆಗಳ ನಿರ್ಮಾಣ ಹಾಗೂ ಪ್ರತಿ ಮನೆಗೂ ಕುಡಿಯುವ ನೀರು ಪೂರೈಕೆಗೆ ನಿರ್ಧರಿಸಿದ್ದೇವೆ. ಭೂರಹಿತ ರೈತರಿಗೆ ವಾರ್ಷಿಕ 10,000 ರೂ ಅನುದಾನ ನೀಡುತ್ತೇವೆ ಮತ್ತು ರಾಜ್ಯಾದ್ಯಂತ 500 ಜನೌಷಧಿ ಕೇಂದ್ರಗಳ ಸ್ಥಾಪನೆ, ನೇಮಕಾತಿ ಹಗರಣದಲ್ಲಿ ಭಾಗಿಯಾಗಿರುವ ಜನರ ಮೇಲೆ ಕಟ್ಟುನಿಟ್ಟಿನ ತನಿಖೆಯ ಘೋಷಣೆ -ಹೊಸ ಕೈಗಾರಿಕೆಗೆ ಶೇ.50ರಷ್ಟು ಸಹಾಯಧನದ ಭರವಸೆ, ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ಮಾಸಿಕ ಪ್ರಯಾಣ ಭತ್ಯೆಯ ಭರವಸೆ -ಏಮ್ಸ್ ಮಾದರಿಯಲ್ಲಿ ಪ್ರತಿ ಲೋಕಸಭಾ ಕ್ಷೇತ್ರದಲ್ಲೂ ಸಿಐಎಂಎಸ್ ಮಾಡುವ ಘೋಷಣೆ ಸೇರಿದಂತೆ ಹಲವು ಘೋಷಣೆಗಳ ಪ್ರಣಾಳಿಕೆ ಬಿಡುಗಡೆ ಮಾಡಿದರು.