ಛತ್ತೀಸಗಢ: ಇಲ್ಲಿನ ನಾರಾಯಣಪುರ ಜಿಲ್ಲೆಯ ಗಣಿಯಿಂದ ಕಬ್ಬಿಣದ ಅದಿರನ್ನು ಸಾಗಿಸುತ್ತಿದ್ದ ನಾಲ್ಕು ಟ್ರಕ್ಗಳಿಗೆ ನಕ್ಸಲರು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಶನಿವಾರ ರಾತ್ರಿ ಘಟನೆ ನಡೆದಿದ್ದು,ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಖಾಸಗಿ ಕಂಪನಿಯೊಂದಕ್ಕೆ ಮಂಜೂರಾದ ಆಮದಾಯಿ ಘಾಟಿ ಗಣಿಯಿಂದ ಕಬ್ಬಿಣದ ಅದಿರು ಸಾಗಿಸುತ್ತಿದ್ದ ನಾಲ್ಕು ಟ್ರಕ್ಗಳನ್ನು ಓರ್ಚಾ-ನಾರಾಯಣಪುರ ರಸ್ತೆಯ ಛೋಟೆಡೊಂಗರ್ ಪೊಲೀಸ್ ಠಾಣೆ ಬಳಿ ನಕ್ಸಲೀಯರು ತಡೆದಿದ್ದಾರೆ.
ಚಾಲಕರ ಬಳಿ ಟ್ರಕ್ನಿಂದ ಕೆಳಕ್ಕೆ ಇಳಿಯುವಂತೆ ಹೇಳಿ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದರು. ಅಷ್ಟರಲ್ಲಿ ನಾಲ್ಕು ಟ್ರಕ್ಗಳು ಸುಟ್ಟು ಭಸ್ಮವಾಗಿದ್ದವು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.