ವಾರಣಾಸಿ: ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯ ಸರ್ವೇಗೆ ವಾರಣಾಸಿ ನ್ಯಾಯಾಲಯವು ಶುಕ್ರವಾರ ಅನುಮತಿ ನೀಡಿದೆ.
ಜ್ಞಾನವಾಪಿ ಮಸೀದಿ ಸಂಕೀರ್ಣವನ್ನು ಸರ್ವೇ ಮಾಡಲು ಎಎಸ್ಐಗೆನಿರ್ದೇಶನ ನೀಡುವಂತೆ ಕೋರಿ ಪ್ರಕರಣದಲ್ಲಿ ಹಿಂದು ಸಂಘಟನೆಗಳು ಅರ್ಜಿ ಸಲ್ಲಿಸಿದ್ದವು. ಹಿಂದು ಸಂಘಟನೆಗಳ ಪರ ವಕೀಲ ವಿಷ್ಣು ಶಂಕರ್ ಜೈನ್ ವಾದ ಮಂಡಿಸಿದ್ದರು. ಮೇ ತಿಂಗಳಲ್ಲಿ ಅರ್ಜಿ ಆಲಿಸಲು ನ್ಯಾಯಾಲಯವು ಒಪ್ಪಿಕೊಂಡಿತ್ತು. ನ್ಯಾಯಾಲಯವು ಎರಡೂ ಕಡೆಯ ವಾದವನ್ನು ಆಲಿಸಿದ ನಂತರ ಈ ತೀರ್ಪು ನೀಡಿದೆ.
ಮಸೀದಿ ಸಂಕೀರ್ಣದ ಇತಿಹಾಸವನ್ನು ಪುರಾತತ್ವ ತನಿಖೆಯಿಂದ ಮಾತ್ರ ಪರಿಹರಿಸಬಹುದು ಎಂದು ಜೈನ್ ನ್ಯಾಯಾಲಯದಲ್ಲಿ ವಾದಿಸಿದ್ದರು. ಜ್ಞಾನವಾಪಿ ಸಂಕೀರ್ಣದ ಮೂರು ಗುಮ್ಮಟಗಳು, ಸಂಕೀರ್ಣದ ಪಶ್ಚಿಮ ಗೋಡೆ ಮತ್ತು ಸಂಪೂರ್ಣ ಸಂಕೀರ್ಣವನ್ನು ಪರಿಶೀಲಿಸಬೇಕೆಂದು ಅವರು ಹೇಳಿದ್ದರು.