News Karnataka Kannada
Sunday, May 05 2024
ದೇಶ

ಬಿಲ್ಕಿಸ್ ಬಾನು ಪ್ರಕರಣ: ಬಿಡುಗಡೆಗೊಂಡಿದ್ದ ಆರೋಪಿಗಳು ಮತ್ತೆ ಸೆರೆಗೆ

೨೦೨೨ರ ಸ್ವಾತಂತ್ರ್ಯ ದಿನದಂದು ಬಿಡುಗಡೆಗೊಂಡಿದ್ದ ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ೧೧ ಅಪರಾಧಿಗಳಿಗೆ ಮುಂದಿನ ೨ ವಾರದೊಳಗೆ ಜೈಲಿಗೆ ಮರಳುವಂತೆ ಸರ್ವೋಚ್ಛನ್ಯಾಯಾಲಯ ಆದೇಶಿಸಿದೆ.
Photo Credit : News Kannada

ನವದೆಹಲಿ: ೨೦೨೨ರ ಸ್ವಾತಂತ್ರ್ಯ ದಿನದಂದು ಬಿಡುಗಡೆಗೊಂಡಿದ್ದ ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ೧೧ ಅಪರಾಧಿಗಳಿಗೆ ಮುಂದಿನ ೨ ವಾರದೊಳಗೆ ಜೈಲಿಗೆ ಮರಳುವಂತೆ ಸರ್ವೋಚ್ಛನ್ಯಾಯಾಲಯ ಆದೇಶಿಸಿದೆ.

ಗೋಧ್ರಾ ಪ್ರಕರಣದ ಬೆನ್ನಿಗೇ ೨೦೦೨ರಲ್ಲಿ ನಡೆದ ಗುಜರಾತ್ ಗಲಭೆಯ ಸಂದರ್ಭದಲ್ಲಿ ಐದು ತಿಂಗಳ ಗರ್ಭಿಣಿಯಾಗಿದ್ದ ಬಿಲ್ಕಿಸ್ ಬಾನೋರ ಮೇಲೆ ಅತ್ಯಾಚಾರ ನಡೆಸಿ ಆಕೆಯ ಕುಟುಂಬದವರನ್ನು ಕೊಂದಿದ್ದ ೧೧ ಅಪರಾಧಿಗಳನ್ನು ಸನ್ನಡತೆಯ ಆಧಾರದಲ್ಲಿ ಅವಧಿಗೂ ಮುನ್ನ ಬಿಡುಗಡೆಗೊಳಿಸುವಂತೆ ಗುಜರಾತ್ ಸರ್ಕಾರ ಆದೇಶ ಹೊರಡಿಸಿತ್ತು.

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿಗಳನ್ನು ಬಂಧನಮುಕ್ತಗೊಳಿಸಿದ ಕುರಿತು ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ವಲ್ ಭುಯಾನ್ ಪೀಠ ನಡೆಸಿತು. ಈ ವೇಳೆ ಸರ್ಕಾರದ ನಿರ್ಧಾರ ಸರಿಯಾದುದಲ್ಲ ಎಂದ ನ್ಯಾಯಪೀಠ, ʼಈ ಪ್ರಕರಣದಲ್ಲಿ ನಾವು ಭಾವನೆಗಳ ಆಧಾರದಲ್ಲಿ ಯಾವುದೇ ನಿರ್ಣಯ ಕೈಗೊಳ್ಳುವುದಿಲ್ಲ. ಎಲ್ಲವನ್ನೂ ಕಾನೂನಿನ ಅಡಿಯಲ್ಲೇ ತೀರ್ಮಾನಿಸಿದ್ದೇವೆʼ ಎಂದು ಹೇಳಿದೆ.

ಬಿಡುಗಡೆಗೊಂಗಿದ್ದ ೧೧ ಆರೋಪಿಗಳು ಜೈಲಿಗೆ ಮರಳಲು ಎರಡು ವಾರಗಳ ಗಡುವು ನೀಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು