ದೆಹಲಿ: ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಅವರ ನ್ಯಾಯಂಗ ಬಂಧನವನ್ನು 2024 ಜನವರಿ 10ರವರೆಗೆ ದೆಹಲಿ ನ್ಯಾಯಾಲಯ ವಿಸ್ತರಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ ಹತ್ತರಂದು ವಿಚಾರಣೆ ನಡೆಸುವುದಾಗಿ ಕೋರ್ಟ್ ಹೇಳಿದೆ. ಜೊತೆಗೆ ಹೆಚ್ಚಿನ ದಾಖಲೆ ನೀಡಲು ಜಾರಿ ನಿರ್ದೇಶನಾಲಯದ ವಕೀಲರಿಗೆ ಅವಕಾಶ ನೀಡಿದೆ.
ನವೆಂಬರ್ 21 ರಂದು ನ್ಯಾಯಾಲಯವು ಮನೀಶ್ ಸಿಸೋಡಿಯಾ ಪರ ವಕೀಲರಾದ ಕುಲದೀಪ್ ಸಿಂಗ್, ವಿಜಯ್ ನಾಯರ್, ಸಮೀರ್ ಮಹೇಂದ್ರು, ರಾಜೇಶ್ ಜೋಶಿ ಅವರಿಗೆ ಸಿಬಿಐ ಪ್ರಧಾನ ಕಚೇರಿಗೆ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಹೆಚ್ಚುವರಿ ದಾಖಲೆಗಳನ್ನು ಪರಿಶೀಲಿಸುವಂತೆ ಸೂಚಿಸಿತ್ತು. ಅಲ್ಲಿಯವರೆಗೆ ಈ ಪ್ರಕರಣದ ವಿಚಾರಣೆಯನ್ನು ಕಾದಿರಿಸಿತ್ತು.
ಈ ಪ್ರಕರಣದ ಬಗ್ಗೆ ನ್ಯಾಯಲಯಕ್ಕೆ ಸಲ್ಲಿರುವ ದಾಖಲೆಗಳು ಇನ್ನು ಬಾಕಿಯಿದ್ದು. ತಕ್ಷಣದಲ್ಲೇ ಸಲ್ಲಿಸಬೇಕು ಎಂದು ಕೋರ್ಟ್ ಹೇಳಿದೆ. ಈ ಕಾರಣಕ್ಕಾಗಿ ಮನೀಶ್ ಸಿಸೋಡಿಯಾ ನ್ಯಾಯಂಗ ಬಂಧನವನ್ನು ವಿಸ್ತರಿಸಿದೆ.