ನವದೆಹಲಿ: ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.
ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರು ಸಿಸೋಡಿಯಾ ಅವರಿಗೆ ಜಾಮೀನು ನೀಡಲು ನಿರಾಕರಿಸಿದರು. ಅವರು ಈ ಹಂತದಲ್ಲಿ ಜಾಮೀನು ಪಡೆಯಲು ಅರ್ಹರಲ್ಲ ಎಂದು ಹೇಳಿದರು.
ಸಿಸೋಡಿಯಾ ಅವರಲ್ಲದೆ, ಜಾರಿ ನಿರ್ದೇಶನಾಲಯ (ಇ.ಡಿ) ದಾಖಲಿಸಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಹ ಆರೋಪಿಗಳಾದ ಉದ್ಯಮಿಗಳಾದ ಅಭಿಷೇಕ್ ಬೋನಪಲ್ಲಿ, ಬೆನೊಯ್ ಬಾಬು ಮತ್ತು ವಿಜಯ್ ನಾಯರ್ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮತ್ತು ಅಬಕಾರಿ ಸಚಿವ ಸಿಸೋಡಿಯಾ ಅವರನ್ನು ಫೆಬ್ರುವರಿ 26 ರಂದು ಸಿಬಿಐ ಮೊದಲ ಬಾರಿಗೆ ಬಂಧಿಸಿತು ಮತ್ತು ಅಂದಿನಿಂದ ಅವರು ಬಂಧನದಲ್ಲಿದ್ದಾರೆ.