News Karnataka Kannada
Monday, April 29 2024
ದೇಶ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನಿಗೆ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್

Delhi HC denies bail
Photo Credit : News Kannada

ಹೊಸದಿಲ್ಲಿ: 12 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಶಿಕ್ಷಕನಿಗೆ ಜಾಮೀನು ನೀಡಲು ದಿಲ್ಲಿ ಉಚ್ಚ ನ್ಯಾಯಾಲಯ ನಿರಾಕರಿಸಿದ್ದು, ‘ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳುವ ಜವಾಬ್ದಾರಿ ಶಿಕ್ಷಕರ ಮೇಲಿದೆ’ ಎಂದು ಹೇಳಿದೆ.

ಅಪ್ರಾಪ್ತ ಸಂತ್ರಸ್ತೆಗಿಂತ 22 ವರ್ಷ ದೊಡ್ಡವನಾದ ಆರೋಪಿ, ಶಿಕ್ಷಕನಾಗಿ ತನ್ನ ತನ್ನ ಸ್ಥಾನವನ್ನು ಮರೆತು ಬಾಲಕಿಯನ್ನು ಲೈಂಗಿಕವಾಗಿ ದುರುಪಯೋಗ ಪಡೆದುಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

ಜತೆಗೆ  ಆರೋಪಿ,  ಶಿಕ್ಷಕ-ವಿದ್ಯಾರ್ಥಿ ಸಂಬಂಧದ ಪಾವಿತ್ರ್ಯವನ್ನು ಕಡೆಗಣಿಸಿದ್ದಾನೆ ಎಂದು ನ್ಯಾಯಮೂರ್ತಿ ಸ್ವರಣ ಕಾಂತಾ ಶರ್ಮಾ ಹೇಳಿದರು.

ಆರೋಪಿ ಶಿಕ್ಷಕನ ವಕೀಲರು ಶಿಕ್ಷಣದಲ್ಲಿ ಅವರ ದೀರ್ಘಕಾಲದ ವೃತ್ತಿಜೀವನದ ಆಧಾರದ ಮೇಲೆ ಜಾಮೀನಿಗಾಗಿ ವಾದಿಸಿದಾಗ, ನ್ಯಾಯಾಲಯವು ಈ ವಾದವನ್ನು ತಿರಸ್ಕರಿಸಿತು, ಅವರ ನಡವಳಿಕೆಯು ಬೋಧನಾ ವೃತ್ತಿ ಮತ್ತು ವಿದ್ಯಾರ್ಥಿ-ಶಿಕ್ಷಕ ಸಂಬಂಧದ ಬಗ್ಗೆ ಅಗೌರವ ತೋರಿಸುತ್ತದೆ ಎಂದು ಹೇಳಿದೆ.

ಪಾಠ ಹೇಳಿ ಕೊಡುವ ನೆಪದಲ್ಲಿ ಬಾಲಕಿಯನ್ನು ಪುಸಲಾಯಿಸಿ, ಪದೆ ಪದೇ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಬೇರೆಯವರಲ್ಲಿ ತಿಳಿಸಿದರೆ ಕೊಲ್ಲುವುದಾಗಿ ಬಾಲಕಿಗೆ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತ ಬಾಲಕಿಯ ಪ್ರಾಸಿಕ್ಯೂಷನ್ ತಿಳಿಸಿದೆ.

ಸಂತ್ರಸ್ತ ಬಾಲಕಿ ಕೊನೆಗೂ ತನ್ನ ಮೇಲಿನ ದೌರ್ಜನ್ಯದ ಕುರಿತು ಶಿಕ್ಷಕಿ ಬಳಿ ಹೇಳಿಕೊಂಡಿದ್ದಾಳೆ. ಇದರಿಂದ ಆರೋಪಿ ಶಿಕ್ಷಕನ ಮೇಲೆ ಕೇಸ್ ದಾಖಲಿಸಲು ಸಾಧ್ಯವಾಗಿದೆ. ” ಇನ್ನು ಬಾಲಕಿಯ ವಯಸ್ಸಿನ ವಿರುದ್ಧ ಹಾಗೂ ನಂಬಿಕೆಯನ್ನು ಮುರಿದು ಕೃತ್ಯ ಎಸಗಿರುವುದಕ್ಕೆ ಆರೋಪಿ ಶಿಕ್ಷಕನಿಗೆ ಜಾಮೀನು ನೀಡಲು ಸಾಧ್ಯವಿಲ್ಲ”ಎಂದು ನ್ಯಾಯಾಲಯ ತಿಳಿಸಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು