News Karnataka Kannada
Thursday, May 02 2024
ವಿದೇಶ

ʻಆಪರೇಷನ್ ಗಂಗಾʼ: ದೆಹಲಿ ತಲುಪಿದ 218 ಭಾರತೀಯ ಪ್ರಜೆಗಳಿದ್ದ ʻ9 ನೇ ವಿಮಾನʼ

Flight
Photo Credit : News Kannada

ದೆಹಲಿ:  ʻಆಪರೇಷನ್ ಗಂಗಾ ಅಡಿಯಲ್ಲಿ ರೊಮೇನಿಯಾದ ರಾಜಧಾನಿ ಬುಕಾರೆಸ್ಟ್‌ನಿಂದ ದೆಹಲಿಗೆ ಉಕ್ರೇನ್‌ನಲ್ಲಿ ಸಿಲುಕಿರುವ 218 ಭಾರತೀಯರನ್ನು ಹೊತ್ತ 9 ನೇ ವಿಶೇಷ ವಿಮಾನವು ಮಂಗಳವಾರ ತಲುಪಿದೆ.

ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ ಅವರು ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು.

ವಿಮಾನ ನಿಲ್ದಾಣದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.ಮಾಧ್ಯಮಗಳ ಜೊತೆ ಮಾತನಾಡಿದ ಅಶ್ವಿನಿ ವೈಷ್ಣವ್, ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಮನೆಗೆ ಕರೆತರಲು ʻಆಪರೇಷನ್ ಗಂಗಾʼ ಅಡಿಯಲ್ಲಿ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಸಂತೋಷದಿಂದಿದ್ದಾರೆ ಮತ್ತು ಭಾರತ ಸರ್ಕಾರದ ಪ್ರಯತ್ನಗಳು ಅದ್ಭುತವಾಗಿದೆ ಎಂದರು.

ಉಕ್ರೇನ್‌ನಲ್ಲಿರುವ ತಮ್ಮ ಸ್ನೇಹಿತರಿಗೆ ತಾಳ್ಮೆಯಿಂದಿರುವಂತೆ ಹೇಳಲು ನಾನು ಈ ವಿದ್ಯಾರ್ಥಿಗಳಿಗೆ ಮನವಿ ಮಾಡುತ್ತೇನೆ. ಅವರನ್ನು ಶೀಘ್ರದಲ್ಲೇ ಸುರಕ್ಷಿತವಾಗಿ ಸ್ಥಳಾಂತರಿಸಲಾಗುವುದು. ವಿಮಾನಗಳು ನಿರಂತರವಾಗಿ ಕೆಲಸ ಮಾಡುತ್ತಿವೆ. ಪರಿಣಾಮಕಾರಿ ಸಮನ್ವಯಕ್ಕಾಗಿ ನಾಲ್ವರು ಮಂತ್ರಿಗಳನ್ನು ಸಹ ಆ ಪ್ರದೇಶದಲ್ಲಿ ನಿಯೋಜಿಸಲಾಗಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು