ಇಂದು ಭಾರತ ರತ್ನ, ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ 97ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ ಅಟಲ್ ಜಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.
ದೆಹಲಿಯ ರಾಜ್ ಘಾಟ್ ನಲ್ಲಿರುವ ಅಟಲ್ ಸ್ಮಾರಕ್ಕೆ ಭೇಟಿ ನೀಡಿದ ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದರು.
Delhi | President Ram Nath Kovind and Prime Minister Narendra Modi pay floral tribute at ‘Sadaiv Atal’ on former PM Atal Bihari Vajpayee's birth anniversary
Source: DD News pic.twitter.com/lMRroPtF8t
— ANI (@ANI) December 25, 2021
ದೇಶಕಂಡ ಅಪರೂಪದ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ
• ಡಿ.25 1924, ಗ್ವಾಲಿಯರ್ ನಲ್ಲಿ ಜನಿಸಿದವರು ಅಟಲ್ ಜಿ.
• 1977ರಲ್ಲಿನ ತುರ್ತು ಪರಿಸ್ಥಿತಿ ವೇಳೆ ಜೈಲು ವಾಸ ಅನುಭವಿಸಿದ್ದರು.
• 1950ರಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು.
• 1942-1945ರ ಕ್ವಿಟ್ ಇಂಡಿಯಾ ಚಳವಳಿ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದರು.
• ಇವರು ರಾಜಕಾರಣಿ ಮಾತ್ರವಾಗದೆ ಅವರೊಬ್ಬ ಕವಿ, ಪತ್ರಕರ್ತ, ವಾಗ್ಮಿ, ಚಿಂತಕರಾಗಿಯೂ ಭಾರತೀಯರ ಮನಗೆದ್ದಿದ್ದರು.
• ಇವರಿಗೆ ಪದ್ಮ ವಿಭೂಷಣ, ಭಾರತ ರತ್ನ, ಲೋಕಮಾನ್ಯ ತಿಲಕ್ ಪ್ರಶಸ್ತಿ, ಉತ್ತಮ ರಾಜಕೀಯ ಪಟು ಪ್ರಶಸ್ತಿ, ಬಾಂಗ್ಲಾ ವಿಮೋಚನಾ ಯುದ್ಧ ಪ್ರಶಸ್ತಿಗಳು ಸಂದಿವೆ.
• ವಾಜಪೇಯಿ ನೇತೃತ್ವದಲ್ಲಿ 1998ರಲ್ಲಿ ರಾಜಸ್ಥಾನದಲ್ಲಿ ಪೋಖ್ರಾನ್ ನಲ್ಲಿ ಸರಣಿ ಪರಮಾಣು ಪರೀಕ್ಷೆಗಳು ಯಶಸ್ವಿಯಾಗಿ ನಡೆಯಿತು.
• 1996ರ ಅಲ್ಪಾವಧಿ ಪ್ರಧಾನಿಯಾದ ಬಳಿಕ ಎನ್ ಡಿಎ ಮುಖ್ಯಸ್ಥರಾಗಿ ಎರಡನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರಿ ವಹಿಸಿಕೊಂಡರು.
• 1999ರಲ್ಲಿ ಆಪರೇಷನ್ ವಿಜಯ್ ಹೆಸರಿನಲ್ಲಿ ನಡೆದ ಕಾರ್ಗಿಲ್ ಯುದ್ಧದ ವೇಳೆ ದೇಶವನ್ನು ಮುನ್ನಡೆಸಿದ ಚಾಣಾಕ್ಷ ಅಟಲ್ ಬಿಹಾರಿ ವಾಜಪೇಯಿ.