News Karnataka Kannada
Sunday, May 05 2024
ದೆಹಲಿ

ಅಟಲ್ ಜಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ

Atalbiharivajpayee
Photo Credit :

ಇಂದು ಭಾರತ ರತ್ನ, ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ 97ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ ಅಟಲ್ ಜಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.

ದೆಹಲಿಯ ರಾಜ್ ಘಾಟ್ ನಲ್ಲಿರುವ ಅಟಲ್ ಸ್ಮಾರಕ್ಕೆ ಭೇಟಿ ನೀಡಿದ ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದರು.

ದೇಶಕಂಡ ಅಪರೂಪದ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ

• ಡಿ.25 1924, ಗ್ವಾಲಿಯರ್ ನಲ್ಲಿ ಜನಿಸಿದವರು ಅಟಲ್ ಜಿ.
• 1977ರಲ್ಲಿನ ತುರ್ತು ಪರಿಸ್ಥಿತಿ ವೇಳೆ ಜೈಲು ವಾಸ ಅನುಭವಿಸಿದ್ದರು.
• 1950ರಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು.
• 1942-1945ರ ಕ್ವಿಟ್ ಇಂಡಿಯಾ ಚಳವಳಿ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದರು.
• ಇವರು ರಾಜಕಾರಣಿ ಮಾತ್ರವಾಗದೆ ಅವರೊಬ್ಬ ಕವಿ, ಪತ್ರಕರ್ತ, ವಾಗ್ಮಿ, ಚಿಂತಕರಾಗಿಯೂ ಭಾರತೀಯರ ಮನಗೆದ್ದಿದ್ದರು.
• ಇವರಿಗೆ ಪದ್ಮ ವಿಭೂಷಣ, ಭಾರತ ರತ್ನ, ಲೋಕಮಾನ್ಯ ತಿಲಕ್ ಪ್ರಶಸ್ತಿ, ಉತ್ತಮ ರಾಜಕೀಯ ಪಟು ಪ್ರಶಸ್ತಿ, ಬಾಂಗ್ಲಾ ವಿಮೋಚನಾ ಯುದ್ಧ ಪ್ರಶಸ್ತಿಗಳು ಸಂದಿವೆ.
• ವಾಜಪೇಯಿ ನೇತೃತ್ವದಲ್ಲಿ 1998ರಲ್ಲಿ ರಾಜಸ್ಥಾನದಲ್ಲಿ ಪೋಖ್ರಾನ್ ನಲ್ಲಿ ಸರಣಿ ಪರಮಾಣು ಪರೀಕ್ಷೆಗಳು ಯಶಸ್ವಿಯಾಗಿ ನಡೆಯಿತು.
• 1996ರ ಅಲ್ಪಾವಧಿ ಪ್ರಧಾನಿಯಾದ ಬಳಿಕ ಎನ್ ಡಿಎ ಮುಖ್ಯಸ್ಥರಾಗಿ ಎರಡನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರಿ ವಹಿಸಿಕೊಂಡರು.
• 1999ರಲ್ಲಿ ಆಪರೇಷನ್ ವಿಜಯ್ ಹೆಸರಿನಲ್ಲಿ ನಡೆದ ಕಾರ್ಗಿಲ್ ಯುದ್ಧದ ವೇಳೆ ದೇಶವನ್ನು ಮುನ್ನಡೆಸಿದ ಚಾಣಾಕ್ಷ ಅಟಲ್ ಬಿಹಾರಿ ವಾಜಪೇಯಿ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು