News Karnataka Kannada
Monday, April 29 2024
ದೆಹಲಿ

ಅಡಕೆ ನಿಷೇಧಿಸಬೇಕು ಎಂದು ಪ್ರಧಾನಿ ಮೋದಿಗೆ ಪತ್ರ ಬರೆದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

Arecanut
Photo Credit :

ನವದೆಹಲಿ : ಅಡಕೆ ಸೇವನೆಯಿಂದ ಕ್ಯಾನ್ಸರ್ ನಂಥ ರೋಗಗಳು ಉಂಟಾಗುತ್ತಿವೆ.ಹೀಗಾಗಿ ಅಡಕೆ ನಿಷೇಧಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಗೆ ಜಾರ್ಖಂಡ್ ನ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಪತ್ರ ಬರೆದಿದ್ದಾರೆ.

ಅಡಕೆ ನಿಷೇಧಿಸುವಂತೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದು, ಪಾನ್ ಮಸಾಲದ ಪ್ರಮುಖ ಭಾಗವಾದ ಅಡಕೆ ಸೇವಿಸುವ ಮೂಲಕ ಕ್ಯಾನ್ಸರ್ ನಂತ ಮಾರಕ ಕಾಯಿಲೆಗಳಿಗೆ ಜನರು ತುತ್ತಾಗುತ್ತಿದ್ದಾರೆ. ಹೀಗಾಗಿ ಜನರು ಅಡಕೆ ಸೇವಿಸದಂತೆ ನಿಷೇಧಿಸಬೇಕು ಎಂದು ಪ್ರಧಾನಿ ಮೋದಿ ಅವರಿಗೆ ಮನವಿ ಸಂಸದ ನಿಶಿಕಾಂತ್ ಮನವಿ ಮಾಡಿದ್ದಾರೆ.

ಅಡಕೆ ಸೇವನೆಯಿಂದ ಹಲವು ಖಾಯಿಲೆಗಳು ಉಂಟಾಗುತ್ತವೆ. ಹೀಗಾಗಿ ಮಹಾರಾಷ್ಟ್ರದಲ್ಲಿ 2018 ರಲ್ಲಿ ಅಡಕೆ ಮಾರಾಟ ಮತ್ತು ಬಳಕೆಯ ನಿಷೇಧಿಸಿದೆ. ಮಾನವರ ಬಳಕೆಗೆ ಅಡಕೆ ನಿಷೇಧಿಸಬೇಕು. ಆದರೆ ಧಾರ್ಮಿಕ ವಿಧಿ ವಿಧಾನಗಳಿಗೆ ಬಳಸಲು ಅನುಮತಿ ಮುಂದುವರೆಸೇಕು ಎಂದು ಸಂಸದನಿಶಿಕಾಂತ್ ಮನವಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು