News Karnataka Kannada
Sunday, May 05 2024
ದೆಹಲಿ

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿ ಹತ್ಯೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಾಲೆಗೆ ಹೋಗಿ ಬರುತ್ತಿದ್ದ ವಿದ್ಯಾರ್ಥಿನಿ ಮೇಲೆ ಖಾಸಗಿ ಬಸ್​ ಕ್ಲೀನರ್ ಅತ್ಯಾಚಾರ ಎಸಗಿದ ಘಟನೆ ಸಂಭವಿಸಿದೆ.
Photo Credit :

ಹೊಸದಿಲ್ಲಿ : ಹದಿನಾಲ್ಕು ವರ್ಷ ವಯಸ್ಸಿನ ಮಾನಸಿಕ ಅಸ್ವಸ್ಥೆ ಯುವತಿಯನ್ನು ಅಪಹರಿಸಿ, ಪ್ಲಾಸ್ಟಿಕ್ ಟೊಪ್ಪಿ ತಯಾರಿಸುವ ಘಟಕದಲ್ಲಿ ಕೂಡಿ ಹಾಕಿ ಸಾಮೂಹಿಕ ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಪೈಶಾಚಿಕ ಘಟನೆ ರಾಷ್ಟ್ರ ರಾಜಧಾನಿಯನ್ನು ಬೆಚ್ಚಿ ಬೀಳಿಸಿದೆ.

ಬಾಲಕಿಯ ಬಟ್ಟೆಯನ್ನೇ ಬಳಸಿ ಆಕೆಯನ್ನು ಹತ್ಯೆ ಮಾಡಿರುವ ಘಟನೆ ಫೆಬ್ರುವರಿ 12ರಂದು ರತ್ರಿ ನರೇಲಾ ಕೈಗಾರಿಕಾ ಪ್ರದೇಶ ಬಳಿಯ ಗ್ರಾಮದಲ್ಲಿ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಬಾಲಕಿಗೆ ಇಬ್ಬರು ಶಂಕಿತರ ಪರಿಚಯ ಇರುವ ಕಾರಣದಿಂದ ಮತ್ತು ತಂದೆಯ ಬಳಿ ಘಟನೆ ಬಗ್ಗೆ ಹೇಳುವುದಾಗಿ ಬಾಲಕಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಆಕೆಯನ್ನು ಹತ್ಯೆ ಮಾಡಲಾಗಿದೆ ಎಂದು ತನಿಖಾಧಿಕಾರಿ ಹೇಳಿದ್ದಾರೆ. ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಇಬ್ಬರು ಆರೋಪಿಗಳು ಆಕೆಯ ಮೃತದೇಹವನ್ನು ಸೆಗಣಿ ಬೆರಣಿಯಡಿ ಹುದುಗಿಸಿ ಇಟ್ಟು, ಅಂಗಡಿ ಮಳಿಗೆಗೆ ಹೊರಗಿನಿಂದ ಬೀಗ ಜಡಿದು ಪರಾರಿಯಾಗಿದ್ದಾರೆ.

ಅಂಗಡಿಯ ಮಾಲೀಕ ಉತ್ತರ ಪ್ರದೇಶದ ಹರ್ದೋಯಿಗೆ ತೆರಳಿ ಒಂದು ವಾರದ ಬಳಿಕ ವಾಪಸ್ಸಾದಾಗ ಅಂಗಡಿಯ ಒಳಗಿನಿಂದ ಕೆಟ್ಟ ವಾಸನೆ ಬಂದಿದೆ. ಅಂಗಡಿ ತೆರೆದು ನೋಡಿದಾಗ ಅರ್ಧ ಕೊಳೆತ ಬಾಲಕಿಯ ದೇಹ ಪತ್ತೆಯಾಗಿದೆ ಎಂದು ವಿವರ ನೀಡಿದ್ದಾರೆ.

ಭಾನುವಾರ ರಾತ್ರಿ ಮುಂಬೈಗೆ ತೆರಳಲು ಸಿದ್ಧತೆ ನಡೆಸುತ್ತಿದ್ದ ಒಬ್ಬ ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ. ಈ ಉತ್ಪಾದನಾ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಎರಡನೇ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಇಬ್ಬರೂ ಶಂಕಿತರು ವಿವಾಹಿತರಾಗಿದ್ದು, ಮಕ್ಕಳನ್ನು ಹೊಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು