News Karnataka Kannada
Friday, May 10 2024
ದೆಹಲಿ

ಆಮ್ ಆದ್ಮಿ ಪಕ್ಷದ ಚುನಾವಣಾ ಪ್ರಚಾರಕ್ಕೆ ಜ. 24ರಂದು ಚಾಲನೆ

ಅರವಿಂದ್ ಕೇಜ್ರಿವಾಲ್​​​ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಇಂದು (ಮಾ.16) ಜಾಮೀನು ಮಂಜೂರು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್​​​ ಕೇಜ್ರಿವಾಲ್​​​ ಅವರಿಗೆ ಇಡಿ 11 ಬಾರಿ ಸಮನ್ಸ್​​​ ನೀಡಿತ್ತು. ಆದರೆ ಯಾವುದಕ್ಕೂ ಉತ್ತರ ನೀಡದ ಕೇಜ್ರಿವಾಲ್​​​ ವಿರುದ್ಧ ಇಡಿ ರೂಸ್ ಅವೆನ್ಯೂ ನ್ಯಾಯಾಲಯದ ಮೊರೆ ಹೋಗಿತ್ತು. ಹಾಗಾಗಿ ಕೋರ್ಟ್​​ ಕೇಜ್ರಿವಾಲ್​​ ಅವರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​​ ಹಾಜರಾಗುವಂತೆ ಆದೇಶ ನೀಡತ್ತು. ಈ ಹಿನ್ನಲೆಯಲ್ಲಿ ಕೇಜ್ರಿವಾಲ್​​​​ ಇಂದು ಕೋರ್ಟ್​​ಗೆ ಹಾಜರಾಗಿದ್ದಾರೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​​​ ಅವರಿಗೆ ವಿಚಾರಣೆ ನಡೆಸಿ ಜಾಮೀನು ನೀಡಿದೆ.
Photo Credit :

ನವದೆಹಲಿ : ವಿಧಾನಸಭೆ ಚುನಾವಣೆ ನಡೆಯಲಿರುವ ಪಂಚ ರಾಜ್ಯಗಳಲ್ಲಿ ಆಮ್ ಆದ್ಮಿ ಪಕ್ಷದ ವರಿಷ್ಠ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೋಮವಾರ(ಜನವರಿ 24) ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ದೆಹಲಿ ಸರ್ಕಾರದ ಉತ್ತಮ ಕೆಲಸದ ವಿಡಿಯೋಗಳನ್ನು ಅಪ್ ಲೋಡ್ ಮಾಡುವಂತೆ ದೆಹಲಿ ನಿವಾಸಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

“ನಮ್ಮ ಸರ್ಕಾರ ಉಚಿತ ವಿದ್ಯುತ್, ನೀರು ಸೇರಿದಂತೆ ಹಲವಾರು ಉತ್ತಮ ಕೆಲಸಗಳನ್ನು ಜಾರಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಒಂದು ಅವಕಾಶ ನೀಡುವಂತೆ ಪಂಜಾಬ್, ಉತ್ತರಪ್ರದೇಶ, ಗೋವಾ ಮತ್ತು ಉತ್ತರಾಖಂಡ್ ರಾಜ್ಯಗಳ ಮತದಾರರಲ್ಲಿ ದೆಹಲಿ ನಿವಾಸಿಗಳು ಮನವಿ ಮಾಡಿಕೊಳ್ಳುವಂತೆ” ಕೇಜ್ರಿವಾಲ್ ತಿಳಿಸಿದ್ದಾರೆ.

ದೆಹಲಿ ಸರ್ಕಾರದ ಅಭಿವೃದ್ಧಿ ಕೆಲಸದ ವಿಡಿಯೋಗಳನ್ನು ಟ್ವೀಟರ್, ಇನ್ಸ್ ಸ್ಟಾಗ್ರಾಮ್, ಫೇಸ್ ಬುಕ್ ನಲ್ಲಿ ಅಪ್ ಲೋಡ್ ಮಾಡಿ, ಅಷ್ಟೇ ಅಲ್ಲ ಆಮ್ ಆದ್ಮಿ ಪಕ್ಷಕ್ಕೆ ಒಂದು ಅವಕಾಶ ನೀಡುವಂತೆ ವಾಟ್ಸ್ ಆಯಪ್ ಮೂಲಕ ಮನವಿ ಮಾಡಿಕೊಳ್ಳಿ ಎಂದು ಈ ಸಂದರ್ಭದಲ್ಲಿ ಕೇಜ್ರಿವಾಲ್ ವಿನಂತಿಸಿಕೊಂಡಿದ್ದಾರೆ.

“ಕೇಜ್ರಿವಾಲ್ ಗೆ ಒಂದು ಅವಕಾಶ” ಕೊಡಿ ಎಂಬ ಪ್ರಚಾರಾಂದೋಲನದಡಿ ದೆಹಲಿ ನಿವಾಸಿಗಳು ದೆಹಲಿ ಸರ್ಕಾರದ ಉತ್ತಮ ಕೆಲಸಗಳನ್ನು ಪಂಚರಾಜ್ಯಗಳ ಮತದಾರರಿಗೆ ತಲುಪಿಸಬೇಕು ಎಂದು ಕೇಜ್ರಿವಾಲ್ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು