News Karnataka Kannada
Monday, May 06 2024
ದೆಹಲಿ

‘ಆಸ್ಕರ್ ಎಲ್ಲರ ಪ್ರೀತಿಪಾತ್ರರು. ನಿಮ್ಮ ದುಃಖದ ಜತೆ ನಾವಿದ್ದೇವೆ’ : ಸೋನಿಯಾ

Sonia Gandhi
Photo Credit :

 ದೆಹಲಿ :   ಹಿರಿಯ ಕಾಂಗ್ರೆಸ್​ ನಾಯಕ ಮತ್ತು ರಾಜ್ಯಸಭಾ ಸದಸ್ಯ ಆಸ್ಕರ್​ ಫರ್ನಾಂಡಿಸ್​ ನಿಧನಕ್ಕೆ ದೂರವಣಿ ಮೂಲಕಕಾಂಗ್ರೆಸ್​ ಹಿರಿಯ ನಾಯಕಿ ಸೋನಿಯಾ ಗಾಂಧಿ ಸಂತಾಪ ಸೂಚಿಸಿದ್ದಾರೆ.

ಆಸ್ಕರ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿಕಟವರ್ತಿಗಳಲ್ಲಿ ಒಬ್ಬರಾಗಿದ್ದರು. ಅವರ ನಿಧನದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿಯವರು ಆಸ್ಕರ್ ಪತ್ನಿ ಬ್ಲೋಸಂ ಫರ್ನಾಂಡಿಸ್ ಅವರಿಗೆ ಮೊಬೈಲ್ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ.

‘ಆಸ್ಕರ್ ಎಲ್ಲರ ಪ್ರೀತಿಪಾತ್ರರು. ನಿಮ್ಮ ದುಃಖದ ಜತೆ ನಾವಿದ್ದೇವೆ’ ಎಂದು ಸೋನಿಯಾ ಧೈರ್ಯ ತುಂಬಿದ್ದಾರೆ. ಈ ವೇಳೆ ಬ್ಲೋಸಂ ಫರ್ನಾಂಡಿಸ್, ಎರಡು ದಿನಗಳ ಬಳಿಕ ಆಸ್ಕರ್​ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ಕೊಂಡೊಯ್ಯಲಾಗುವುದು. ಅಲ್ಲಿಗೆ ತಾವು ಹಾಗೂ ರಾಹುಲ್ ಗಾಂಧಿ ಭೇಟಿ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಪಾರ್ಥಿವ ಶರೀರವನ್ನು ಉಡುಪಿ ಹಾಗೂ ಮಂಗಳೂರು ಕಾಂಗ್ರೆಸ್ ಕಚೇರಿಗೆ ಕೊಂಡೊಯ್ದು ಬಳಿಕ ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ಅಂತಿಮ ದರ್ಶನಕ್ಕಾಗಿ ಕೊಂಡೊಯ್ಯಲು ಮಗಳು ನಿರ್ಧರಿಸಿದ್ದಾಳೆ ಎಂದು ಬ್ಲೋಸಂ ಫರ್ನಾಂಡಿಸ್ ದೂರವಾಣಿ ಕರೆಯಲ್ಲಿ ಸೋನಿಯಾ ಗಾಂಧಿಗೆ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು