News Karnataka Kannada
Tuesday, April 30 2024
ದೆಹಲಿ

ಇಂದು ಪ್ರಧಾನಿ ಮೋದಿಯಿಂದ ‘ಸ್ವಚ್ಛ ಭಾರತ ಮಿಷನ್-ನಗರ 2.0’ ಮತ್ತು ‘ಅಮೃತ್ 2.0’ ಗೆ ಚಾಲನೆ

Modi Delhi 26 6 21
Photo Credit :

ನವದೆಹಲಿ :  ನರೇಂದ್ರ ಮೋದಿ ಅವರು ಇಂದು ಸ್ವಚ್ಛ ಭಾರತ್ ಮಿಷನ್- ಅರ್ಬನ್ 2.0 ಮತ್ತು ಅಟಲ್ ಮಿಷನ್ ಫಾರ್ ರಿಜುವನೇಷನ್ ಆಂಡ್ ಅರ್ಬನ್ ಟ್ರಾನ್ಸ್‌ಫಾರ್ಮೇಶನ್ 2.0ಗೆ ಚಾಲನೆ ನೀಡಲಿದ್ದಾರೆ.

ನವದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಪ್ರಧಾನಿ ಮೋದಿ ಈ ಎರಡು ಮಹತ್ವದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಪ್ರಧಾನಿ ಮೋದಿ ಅವರ ದೂರದೃಷ್ಟಿಗೆ ಅನುಗುಣವಾಗಿ, ನಮ್ಮ ಎಲ್ಲಾ ನಗರಗಳನ್ನು ಕಸ ಮುಕ್ತ ಗೊಳಿಸುವ ಮತ್ತು ಜಲ ಸುರಕ್ಷಿತ ಮಾಡುವ ಆಕಾಂಕ್ಷೆಯನ್ನು ಸಾಕಾರಗೊಳಿಸಲು ಸ್ವಚ್ಛಭಾರತ್ ಯೋಜನೆ-ನಗರ 2.0 ಮತ್ತು ಅಮೃತ್ 2.0ನ್ನು ವಿನ್ಯಾಸಗೊಳಿಸಲಾಗಿದೆ.

ಈ ಪ್ರಮುಖ ಯೋಜನೆಗಳು ತ್ವರಿತ ನಗರೀಕರಣಕ್ಕೆ ಸಾಕ್ಷಿಯಾಗುತ್ತಿರುವ ಭಾರತದ ಸವಾಲುಗಳನ್ನು ಪರಿಣಾಮಕಾರಿಯಾಗಿ ಎದುರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿವೆ. ಜೊತೆಗೆ ʻಸುಸ್ಥಿರ ಅಭಿವೃದ್ಧಿ ಗುರಿಗಳು 2030ʼ ಸಾಧನೆಗೆ ಸಹಾಯ ಮಾಡುತ್ತವೆ.

ಕೇಂದ್ರ ಸಚಿವರು, ವಸತಿ ಮತ್ತು ನಗರ ವ್ಯವಹಾರಗಳ ಖಾತೆ ಸಹಾಯಕ ಸಚಿವರು, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ನಗರಾಭಿವೃದ್ಧಿ ಸಚಿವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು