ನವದೆಹಲಿ: ಇಂದು ಸಂಜೆ 4.30ಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ನಿಗದಿಪಡಿಸಲಾಗಿದೆ.ದೇಶದಲ್ಲಿ ಕೊರೋನಾ ಹಾಗೂ ಓಮಿಕ್ರಾನ್ ಆರ್ಭಟ ಹೆಚ್ಚಾಗಿದೆ. ದಿನೇ ದಿನೇ ಹೆಚ್ಚಾಗುತ್ತಿರುವಂತ ಕೊರೋನಾ, ಓಮಿಕ್ರಾನ್ ಕೇಸ್ ಗಳಿಂದಾಗಿ 3ನೇ ಅಲೆ ಆರಂಭವಾಗಿದೆ ಎನ್ನಲಾಗುತ್ತಿದೆ.
ಭಾರತದಲ್ಲಿ ಕೊರೋನಾ, ಓಮಿಕ್ರಾನ್ ಸ್ಥಿತಿಗತಿಯ ಬಗ್ಗೆ ಚರ್ಚಿಸಲು ಇಂದು ಸಂಜೆ 4.30ಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಕೇಂದ್ರ ಸಚಿವರು ಸೇರಿದಂತೆ ವಿವಿಧ ತಜ್ಞರು ಭಾಗವಹಿಸಲಿದ್ದಾರೆ. ಇಂದಿನ ಸಭೆಯಲ್ಲಿ ದೇಶದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಮಹತ್ವದ ವಿಚಾರಗಳ ಕುರಿತಂತೆ ಚರ್ಚೆ ಕೂಡ ನಡೆಯಲಿದೆ ಎನ್ನಲಾಗುತ್ತಿದೆ.