News Karnataka Kannada
Friday, May 03 2024
ದೆಹಲಿ

ಇಂಧನ ಬೆಲೆ ಏರಿಕೆ ಸರಕಾರದ ಕೈಯಲ್ಲಿಲ್ಲ: ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್

Hardip Singh
Photo Credit : News Kannada

ಹೊಸದಿಲ್ಲಿ: ಇಂಧನ ಬೆಲೆ ಏರಿಕೆ ಕೇಂದ್ರ ಸರಕಾರದ ಕೈಯಲ್ಲಿಲ್ಲ. ಅದು ಅಂತಾರಾಷ್ಟ್ರೀಯವಾಗಿ ನಿರ್ಧಾರವಾಗು ತ್ತದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್‌ ಪುರಿ ತಿಳಿಸಿದ್ದಾರೆ.

1979-86ರ ಅವಧಿಯಲ್ಲಿ ಪೆಟ್ರೋಲ್‌ ಮತ್ತು ನೈಸರ್ಗಿಕ ಅನಿಲ ಬೆಲೆ ಶೇ.126 ಮತ್ತು 2000-2007ರಲ್ಲಿ ಶೇ.60 ಏರಿಕೆ ಯಾಗಿದೆ.

ಕಳೆದ 7 ವರ್ಷಗಳಲ್ಲಿ ಶೇ. 30 ಏರಿಕೆಯಾಗಿದೆ. ಜಾಗತಿಕ ಮಟ್ಟದಲ್ಲಿ ಲಭ್ಯವಿರುವ ಕಚ್ಚಾ ತೈಲಕ್ಕಿಂತ ಹೆಚ್ಚಿನ ಬೇಡಿಕೆಯಿದೆ. ಇದರಿಂದಾಗಿ ಬೆಲೆ ಏರಿಕೆ ಯಾಗುತ್ತಿದೆ. ಕಚ್ಚಾ ತೈಲದ ಬೆಲೆ ವಿನಿಮಯ ದರ, ಸರಕು ಸಾಗಣೆ ಮತ್ತು ಡೀಲರ್‌ ಬೆಲೆ ಆಧಾರಿತವಾಗಿರುತ್ತದೆ ಎಂದು ಲೋಕಸಭೆಗೆ ಅವರು ತಿಳಿಸಿದ್ದಾರೆ.

ಪೆಟ್ರೋಲ್‌ ಜತೆ ಎಥೆನಾಲ್‌ ಬೆರೆಸುವ ವಿಚಾರದಲ್ಲಿ ಮಾತನಾಡಿದ ಅವರು, “ಶೇ.9 ಎಥೆನಾಲ್‌ ಬೆರೆಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ. 2025ರ ವೇಳೆಗೆ ಶೇ.20ರಷ್ಟು ಪ್ರಮಾಣದಲ್ಲಿ ಎಥೆನಾಲ್‌ ಬೆರೆಸುವ ಪ್ರಕ್ರಿಯೆಯಲ್ಲಿ ಯಶಸ್ವಿಯಾಗುವ ಸಾಧ್ಯತೆ ಇದೆ ಎಂದು ಅವರು ಇದೇ ಸಂದರ್ಭದಲ್ಲಿ ನುಡಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು