News Karnataka Kannada
Monday, April 29 2024
ದೆಹಲಿ

ಉತ್ತರ ಪ್ರದೇಶದ ಕುಶಿನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿರುವ : ಪ್ರಧಾನಿ

Modi
Photo Credit :

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 20 ರಂದು ಉತ್ತರ ಪ್ರದೇಶದ ಕುಶಿನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಸೋಮವಾರ (October 18) ಹೇಳಿಕೆಯಲ್ಲಿ ತಿಳಿಸಿದೆ.

ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಈ ವಾರ ಕಾರ್ಯಾರಂಭ ಮಾಡಲಿದ್ದು, ಭಾರತದಲ್ಲಿ ಅಂತಾರಾಷ್ಟ್ರೀಯ ಬೌದ್ಧ ಯಾತ್ರಿಕರಿಗೆ ವಿಮಾನ ಪ್ರಯಾಣಕ್ಕೆ ಅನುಕೂಲ ಮಾಡಿಕೊಡಲಿದೆ.

‘ಉದ್ಘಾಟನಾ ವಿಮಾನವು ಶ್ರೀಲಂಕಾದ ಕೊಲಂಬೊದಿಂದ 125 ಗಣ್ಯರು ಮತ್ತು ಬೌದ್ಧ ಸನ್ಯಾಸಿಗಳನ್ನು ಹೊತ್ತ ವಿಮಾನ ,ನಿಲ್ದಾಣದಲ್ಲಿ ಇಳಿಯಲಿದೆ.ಭಗವಾನ್ ಬುದ್ಧನ ಮಹಾಪರಿನಿರ್ವಾಣ ಸ್ಥಳವನ್ನು ಭೇಟಿ ಮಾಡಲು ವಿಶ್ವದಾದ್ಯಂತ ಬೌದ್ಧರಿಗೆ ಇರುವ ಅನುಕೂಲತೆಯನ್ನು ಎತ್ತಿ ತೋರಿಸುತ್ತದೆ’ ಎಂದು ಸಚಿವಾಲಯ ಹೇಳಿದೆ.ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು ಕುಶಿನಗರ ವಿಮಾನ ನಿಲ್ದಾಣವನ್ನು ಹೊಸ ಟರ್ಮಿನಲ್ ಕಟ್ಟಡದೊಂದಿಗೆ 3600 ಚದರ ಮೀಟರ್ ವಿಸ್ತೀರ್ಣದಲ್ಲಿ ರಾಜ್ಯ ಸರ್ಕಾರದ ಸಹಯೋಗದೊಂದಿಗೆ ರೂ 260 ಕೋಟಿ ಅಂದಾಜು ವೆಚ್ಚದಲ್ಲಿ ಅಭಿವೃದ್ಧಿಪಡಿಸಿದೆ.

ಉದ್ಘಾಟನೆಯ ನಂತರ ಮಹಾಪರಿನಿರ್ವಾಣ ಸ್ತೂಪ ಮತ್ತು ದೇವಾಲಯದ ಬೌದ್ಧಧರ್ಮದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು