News Karnataka Kannada
Sunday, April 28 2024
ದೆಹಲಿ

ಏರ್ ಇಂಡಿಯಾ ಮಾರಾಟ ಭಾರತದ ಖಾಸಗೀಕರಣ ಪ್ರಯತ್ನಗಳಲ್ಲಿ ಮಹತ್ವದ ಮೈಲಿಗಲ್ಲಾಗಿದೆ: ಅಲ್ಫರ್ಡ್ ಶಿಪ್ಕೆ

Airplane
Photo Credit :

ನವದೆಹಲಿ : ಭಾರತದ ಸರ್ಕಾರಿ ಸ್ವಾಮ್ಯದಲ್ಲಿದ್ದ ಏರ್ ಇಂಡಿಯಾ ವಿಮಾನ ಸಂಸ್ಥೆಯನ್ನು ಖಾಸಗೀಕರಣಗೊಳಿಸಿರುವ ಬಗ್ಗೆ ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ಪ್ರತಿಕ್ರಿಯೆ ನೀಡಿದ್ದು, ಮಹತ್ವದ ಮೈಲಿಗಲ್ಲು ಎಂದು ಬಣ್ಣಿಸಿದೆ.

ಏರ್ ಇಂಡಿಯಾದ ಮಾರಾಟ ಭಾರತದ ಖಾಸಗೀಕರಣದ ಪ್ರಯತ್ನಗಳಲ್ಲಿ ಮಹತ್ವದ ಮೈಲಿಗಲ್ಲಾಗಿದೆ ಎಂದು ಐಎಂಎಫ್-ಎಸ್ ಟಿಐ ಪ್ರಾದೇಶಿಕ ತರಬೇತಿ ಇನ್ಸ್ಟಿಟ್ಯೂಟ್ ಹಾಗೂ ಐಎಂಎಫ್ ನ ಭಾರತ ಮಿಷನ್ ನ ಮಾಜಿ ಮುಖ್ಯಸ್ಥ ಅಲ್ಫರ್ಡ್ ಶಿಪ್ಕೆ ಹೇಳಿದ್ದಾರೆ. ಟಾಟಾ ಗ್ರೂಪ್ ಏರ್ ಇಂಡಿಯಾವನ್ನು ಖರೀದಿಸಿದ್ದು ಅ.11 ರಂದು ಲೆಟರ್ ಆಫ್ ಇಂಟೆಂಟ್ ನ್ನು ಹಸ್ತಾಂತರಿಸಲಾಗಿದೆ.

“ಏರ್ ಇಂಡಿಯಾವನ್ನು ಮಾರಾಟ ಮಾಡುವ ಇತ್ತೀಚಿನ ಭಾರತದ ನಡೆಯನ್ನು ನಾವು ಸ್ವಾಗತಿಸುತ್ತೇವೆ, ಇದು ಪ್ರಮುಖ ಮೈಲಿಗಲ್ಲಾಗಿದೆ” ಎಂದು ಪಿಟಿಐ ಗೆ ನೀಡಿರುವ ಸಂದರ್ಶನದಲ್ಲಿ ಅಲ್ಫರ್ಡ್ ಶಿಪ್ಕೆ ಅಭಿಪ್ರಾಯಪಟ್ಟಿದ್ದಾರೆ.  15,300 ಕೋಟಿ ರೂಪಾಯಿ ಸಾಲದ ಹೊರೆಯೊಂದಿಗೆ 2,700 ಕೋಟಿ ರೂಪಾಯಿ ಹಣ ನೀಡಿ ಟಾಟಾ ಹರಾಜು ಪ್ರಕ್ರಿಯೆಯಲ್ಲಿ ಏರ್ ಇಂಡಿಯಾ ಸಂಸ್ಥೆಯನ್ನು ಖರೀದಿಸಿತ್ತು.

ಸಾಮಾನ್ಯವಾಗಿ ಖಾಸಗೀಕರಣದ ಫಲವವನ್ನು ಹೆಚ್ಚಿಸುವುದಕ್ಕೆ ಅಂತಾರಾಷ್ಟ್ರೀಯ ಅನುಭವದಲ್ಲಿ ಮಧ್ಯಮ ಅವಧಿಯ ಖಾಸಗೀಕರಣ ಯೋಜನೆಗಳನ್ನು, ಘನ ನಿಯಂತ್ರಕ ಚೌಕಟ್ಟುಗಳು, ಸ್ಪರ್ಧಾತ್ಮಕ ಮಾರುಕಟ್ಟೆಗಳು ಮತ್ತು ಪ್ರಮುಖ ಪಾಲುದಾರರ ಖರೀದಿಗಳನ್ನು ಹೈಲೈಟ್ ಮಾಡಲಾಗುತ್ತದೆ ಎಂದು ಶಿಪ್ಕೆ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು