Categories: ದೆಹಲಿ

ಓಮಿಕ್ರಾನ್ ನಿಯಂತ್ರಣಕ್ಕೆ ದೇಶಿ ನಿರ್ಮಿತ ಕೋವ್ಯಾಕ್ಸ್ ಬೂಸ್ಟರ್ ಲಸಿಕೆ ಪರಿಣಾಮಕಾರಿ

ನವದೆಹಲಿ, ಡಿ.18 : ಓಮಿಕ್ರಾನ್ ನಿಯಂತ್ರಣಕ್ಕೆ ಕೋವಿಶೀಲ್ಡ್ ಗಿಂತಲೂ ದೇಶಿ ನಿರ್ಮಿತ ಕೋವ್ಯಾಕ್ಸ್ ಬೂಸ್ಟರ್ ಲಸಿಕೆ ಪರಿಣಾಮಕಾರಿ ಎಂದು ಭಾರತೀಯ ವಿಜ್ಞಾನಿ ಹೇಳಿದ್ದಾರೆ. ಭಾರತೀಯ ಸಾರ್ಸ್ ಕೋವ್-2 ಜಿನೋಮಿಕ್ಸ್ ಕನ್ಸೋರ್ಟಿಯಂ (ಐಎನ್‍ಎಸ್‍ಎಸಿಂಜಿ) ನಿರ್ದೇಶಕ ಅನುರಾಗ್ ಅಗರ್‍ವಾಲ್ ಕೇಂದ್ರ ಸರ್ಕಾರಕ್ಕೆ ಈ ಕುರಿತು ಶಿಫಾರಸ್ಸು ಮಾಡಿದ್ದಾರೆ.

ವಿದೇಶದಲ್ಲಿ ನೋವ್ಯಾಕ್ಸ್ ಎಂದು ಕರೆಯಲಾಗುವ ಭಾರತೀಯ ನಿರ್ಮಿತ ಕೋವ್ಯಾಕ್ಸ್ ಲಸಿಕೆಗೆ ಇತ್ತೀಚೆಗೆ ವಿಶ್ವಸಂಸ್ಥೆ ಜಾಗತಿಕ ಮನ್ನಣೆ ನೀಡಿದೆ.

ನೋವ್ಯಾಕ್ಸ್ ಐಎನ್‍ಸಿ ಅಭಿವೃದ್ಧಿ ಪಡಿಸಿದ ಮರುಸಂಯೋಜಿತ ಪ್ರೋಟಿನ್‍ಗಳ ಈ ಲಸಿಕೆಯ ಸುರಕ್ಷಿತ ಪ್ರೋಫೈಲ್ ಉತ್ತಮವಾಗಿದೆ.ಜಾಗತಿಕ ಮಾರುಕಟ್ಟೆಯಲ್ಲಿ ಲಭ್ಯ ಇರುವ ಎಲ್ಲಾ ಲಸಿಕೆಗಳಿಗಿಂತಲೂ ರೋಗ ನಿರೋಧಕ ಶಕ್ತಿ ವೃದ್ಧಿಸುವಲ್ಲಿ ಕೋವ್ಯಾಕ್ಸ್ ಮುಂದಿದೆ ಎಂದು ಅಗರ್‍ವಾಲ್ ಹೇಳಿದ್ದಾರೆ.

ಓಮಿಕ್ರಾನ್ ತಡೆಯಲು ಕೋವ್ಯಾಕ್ಸ್ ಬೂಸ್ಟರ್ ಲಸಿಕೆ ಅಸ್ಟ್ರೇಜೆನಿಕಾ ಮತ್ತು ಕೋವಿಶೀಲ್ಡ್ ಲಸಿಕೆಗಳಿಗಿಂತಲೂ ಶೇ.50ರಷ್ಟು ಹೆಚ್ಚು ಪರಿಣಾಮಕಾರಿ. ದಕ್ಷಿಣ ಆಫ್ರಿಕಾದಲ್ಲಿ 29,960 ಮಂದಿಯ ಮೇಲೆ ಮೂರನೇ ಹಂತದ ಪ್ರಯೋಗಾಲಯ ಪರೀಕ್ಷೆಗಳು ನಡೆದಾಗ ಫಲಿತಾಂಶ ಯಶಸ್ವಿಯಾಗಿದೆ.

ಫೈಜರ್ ಮತ್ತು ಮಡ್ರೆನಾ ಲಸಿಕೆಗಳನ್ನು ಕೋವ್ಯಾಕ್ಸ್ ಹಿಂದಿಕ್ಕಿದೆ. ಬ್ರಿಟನ್‍ನಲ್ಲಿ ನಡೆದ ಪ್ರಯೋಗ ಪರೀಕ್ಷೆಯಲ್ಲಿ ಶೇ.96ರಷ್ಟು ಉತ್ತಮ ಎಂದು ಸಾಬೀತಾಗಿದೆ ಎಂದು ಅವರು ಹೇಳಿದ್ದಾರೆ.

Gayathri SG

Recent Posts

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಅರ್ಜಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…

5 mins ago

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

47 mins ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

50 mins ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

1 hour ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

2 hours ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2 hours ago