News Karnataka Kannada
Friday, May 03 2024
ದೆಹಲಿ

ಕಾಂಗ್ರೆಸ್ ನಾಯಕನ ಹತ್ಯೆಗೆ ಸೇಡು ತೀರಿಸಿಕೊಳ್ಳಲು ಮನೆಗಳಿಗೆ ಬೆಂಕಿ; 7 ಮಂದಿ ಬಲಿ

Police in Mulubagil emptying a lake to investigate 8 years old murder case
Photo Credit :

ಹೊಸದಿಲ್ಲಿ : ತೃಣಮೂಲ ಕಾಂಗ್ರೆಸ್ ನಾಯಕನ ಹತ್ಯೆಗೆ ಸೇಡು ತೀರಿಸಿಕೊಳ್ಳಲು ಹಲವು ಮನೆಗಳಿಗೆ ಬೆಂಕಿ ಹಚ್ಚಲಾಗಿದ್ದು ಕನಿಷ್ಠ 7 ಮಂದಿ ಸಜೀವ ದಹನವಾಗಿರುವುದಾಗಿ ಸ್ಥಳೀಯ ಮೂಲಗಳು ತಿಳಿಸಿವೆ.

ಅಪರಿಚಿತ ದುಷ್ಕರ್ಮಿಗಳು ಸೋಮವಾರ ಬಿರ್ಭೂಮ್ ನ ರಾಮ್‌ಪುರಹತ್‌ನಲ್ಲಿ ಪಂಚಾಯತ್ ಮುಖಂಡ ಭಾದು ಶೇಖ್ ಮೇಲೆ ಕಚ್ಚಾ ಬಾಂಬ್‌ಗಳನ್ನು ಎಸೆದಿದ್ದಾರೆ.

ರಾಷ್ಟ್ರೀಯ ಹೆದ್ದಾರಿ-60ರಲ್ಲಿ ಅಂಗಡಿಯೊಂದರಲ್ಲಿ ಇರುವಾಗ ಶೇಖ್ ಅವರ ಮೇಲೆ ಬಾಂಬ್ ದಾಳಿ ನಡೆಸಲಾಗಿದ್ದು, ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸುವ ಮೊದಲೇ ಅವರು ಮೃತಪಟ್ಟಿದ್ದಾರೆ.

ಮುಖಂಡದ ಸಾವಿನ ಸುದ್ದಿಯಿಂದ ರೊಚ್ಚಿಗೆದ್ದ ಗುಂಪು ಗ್ರಾಮದಲ್ಲಿನ ವಿರೋಧಿ ಗುಂಪಿನ ಐದು ಮನೆಗಳಿಗೆ ಬೀಗ ಜಡಿದು ಬೆಂಕಿ ಹಚ್ಚಿದೆ. ಪರಿಣಾಮ ಕನಿಷ್ಠ 7 ಮಂದಿ ಜೀವಂತವಾಗಿ ಸುಟ್ಟು ಕರಕಲಾಗಿದ್ದಾರೆ.

ಸೋಮವಾರ ರಾತ್ರಿ ಸುಮಾರು 10ರಿಂದ 12 ಮನೆಗಳು ಬೆಂಕಿಯಲ್ಲಿ ಹೊತ್ತು ಉರಿದಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ನಂತರ ಬಿರ್ಭೂಮ್ ಜಿಲ್ಲಾ ಮ್ಯಾಜಿಸ್ಟ್ರೇಟ್, ಅಗ್ನಿಶಾಮಕ ಅಧಿಕಾರಿಗಳು ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು