News Karnataka Kannada
Monday, April 29 2024
ದೆಹಲಿ

ಕಾಂಗ್ರೆಸ್ ಪಕ್ಷದಲ್ಲಿ ಶಿಸ್ತು ಮತ್ತು ಒಗ್ಗಟ್ಟಿನ ಅಗತ್ಯವಿದೆ : ಸೋನಿಯಾ ಗಾಂಧಿ

Sonia Gandhi
Photo Credit :

ಕಾಂಗ್ರೆಸ್ ಪಕ್ಷದಲ್ಲಿ ಶಿಸ್ತು ಮತ್ತು ಒಗ್ಗಟ್ಟಿನ ಅಗತ್ಯವಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದು, ವೈಯಕ್ತಿಕ ಮಹತ್ವಾಕಾಂಕ್ಷೆಗಳನ್ನು ಬದಿಗೊತ್ತಿ ಪಕ್ಷವನ್ನು ಸಂಘಟಿಸಬೇಕಾಗಿದೆ ಎಂದು ಕರೆ ನೀಡಿದ್ದಾರೆ.

ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಕಾರ್ಯತಂತ್ರ ರೂಪಿಸಲು ಇಂದು ನಡೆದ ಪಕ್ಷದ ಉನ್ನತ ಮುಖಂಡರ ಸಭೆಯಲ್ಲಿ ಮಾತನಾಡಿದ ಸೋನಿಯಾ, ಕೇಂದ್ರ ಸರ್ಕಾರದಆಡಳಿತದ ವಿರುದ್ಧ ಹೋರಾಟವನ್ನು ಪಕ್ಷ ದುಪ್ಪಟ್ಟುಗೊಳಿಸಬೇಕು ಎಂದರು.

ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆದ ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ಉಸ್ತುವಾರಿ ಹಾಗೂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಸಭೆಯಲ್ಲಿ ರಾಹುಲ್ ಗಾಂಧಿ ಕೂಡಾ ಭಾಗವಹಿಸಿದ್ದರು.

ರಾಜ್ಯ ಮುಖಂಡರಲ್ಲಿ ಸ್ಪಷ್ಟತೆ ಹಾಗೂ ಒಗ್ಗಟ್ಟಿನ ಕೊರತೆಯನ್ನು ಪ್ರಸ್ತಾಪಿಸಿದ ಸೋನಿಯಾ, ಶಿಸ್ತು ಮತ್ತು ಒಗ್ಗಟ್ಟು ಅತ್ಯಂತ ಅಗತ್ಯವಿದೆ. ಪ್ರತಿಯೊಬ್ಬರು ಪಕ್ಷವನ್ನು ಸಂಘಟಿಸಬೇಕಾಗಿದೆ. ಇದಕ್ಕಾಗಿ ವೈಯ್ತಕಿಕ್ತ ಮಹತ್ವಕಾಂಕ್ಷೆಗಳನ್ನು ಬದಿಗೊತ್ತಬೇಕಾಗಿದೆ. ಇದರಲ್ಲಿ ವೈಯಕ್ತಿಕ ಮತ್ತು ಸಾಮೂಹಿಕ ಯಶಸ್ಸು ಅಡಗಿದೆ ಎಂದು ಹೇಳಿದರು.

ಮುಂದಿನ ವರ್ಷ ಆರಂಭದಲ್ಲಿ ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು