ದೆಹಲಿ: ಕುತುಬ್ ಮಿನಾರ್ ಅನ್ನು ದೇವಾಲಯವನ್ನಾಗಿ ಪುನರುಜ್ಜೀವನಗೊಳಿಸಲು ಸಾಧ್ಯವಿಲ್ಲ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ)ಹೇಳಿದೆ. ಕುತುಬ್ ಮಿನಾರ್ ಅನ್ನು ದೇವಸ್ಥಾನವಾಗಿ ಮರುಸ್ಥಾಪಿಸುವಂತೆ ಕೋರಿ ಸಾಕೇತ್ ನ್ಯಾಯಾಲಯದಲ್ಲಿ ಸಲ್ಲಿಸಲಾದ ಅರ್ಜಿಗೆ ಎಎಸ್ಐ ಪ್ರತಿಕ್ರಿಯಿಸಿದೆ.
ಕುತುಬ್ ಮಿನಾರ್ ಅನ್ನು ರಾಜಾ ವಿಕ್ರಮಾದಿತ್ಯನಿಂದ ನಿರ್ಮಿಸಲಾಗಿದ್ದು, ಇದು ಹಿಂದೂ ದೇವಾಲಯ ಎಂದು ಎಎಸ್ಐನ ಮಾಜಿ ಪ್ರಾದೇಶಿಕ ನಿರ್ದೇಶಕ ಧರಂವೀರ್ ಶರ್ಮಾ ಹೇಳಿಕೆ ನೀಡಿದ್ದರು.
ಶರ್ಮಾ ಹೇಳಿಕೆ ಬಳಿಕ ಕುತುಬ್ ಮಿನಾರ್ ವಿವಾದ ಭುಗಿಲೆದ್ದಿತು. ಕುತುಬ್ ಮಿನಾರ್ ಅನ್ನು ದೇವಸ್ಥಾನವನ್ನಾಗಿ ಪರಿವರ್ತಿಸಿ, ಅಲ್ಲಿಯೇ ದೇಗುಲದ ಕಾರ್ಯನಿರ್ವಹಣೆಗೆ ಅವಕಾಶ ನೀಡುವಂತೆ ಕೋರಿ ಸಾಕೇತ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿತ್ತು.
ಈ ಬಗ್ಗೆ ನ್ಯಾಯಾಲಯವು ಎಎಸ್ಐ ಅಭಿಪ್ರಾಯವನ್ನು ಕೇಳಿದೆ. ಕುತುಬ್ ಮಿನಾರ್ ಐತಿಹಾಸಿಕ ಸ್ಥಳವಾಗಿ 1914 ರಿಂದ ಭಾರತೀಯ ಪುರಾತತ್ವ ಸರ್ವೇಕ್ಷಣೆಯ ರಕ್ಷಣೆಯಲ್ಲಿದೆ. ಈಗ ಅದರ ರಚನೆಯನ್ನು ಬದಲಾಯಿಸಲಾಗುವುದಿಲ್ಲ. ಸಂರಕ್ಷಿತ ಐತಿಹಾಸಿಕ ಸ್ಥಳವನ್ನು ದೇವಾಲಯವನ್ನಾಗಿ ಮಾಡಲು ಸಾಧ್ಯವಿಲ್ಲ. ಇಲ್ಲಿ ದೇವಾಲಯದ ಚಟುವಟಿಕೆಗಳನ್ನು ನಡೆಸುವ ಸಾಧ್ಯತೆ ಇಲ್ಲ ಎಂದು ಎಎಸ್ಐ ನ್ಯಾಯಾಲಯಕ್ಕೆ ಉತ್ತರಿಸಿದೆ.
ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್…
ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…
ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…
ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.
ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…
ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…