ನವದೆಹಲಿ:ಕೇಂದ್ರ ಸರಕಾರ ಮೇಕ್ ಇನ್ ಇಂಡಿಯಾ ಮೂಲಕ ರಕ್ಷಣಾ ಯೋಜನೆಗಳಿಗೆ ಒತ್ತು ನೀಡಿದೆ ಎಂದು ರಾಷ್ಟ್ರಪತಿ ರಾಮನಾಥನ್ ಕೋವಿಂದ್ ತಿಳಿಸಿದ್ದಾರೆ.
ಸೋಮವಾರ ಜಂಟಿ ಲೋಕಸಭಾ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು, ನಿಯಮಗಳನ್ನು ಸರಳೀಕರಣಗೊಳಿಸುವ ಮೂಲಕ ಡ್ರೋಣ್ ಕಂಪನಿಗಳಿಗೆ ಉತ್ತೇಜನ ನೀಡಲಾಗಿದೆ ಎಂದರು.
ಕೋವಿಡ್ ಸಂಕಷ್ಟದ ನಡುವೆಯೂ ಆರೋಗ್ಯ ಕಾರ್ಯಕರ್ತರು ಸೇವೆ ಸಲ್ಲಿಸುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಇಂಧನ ಮತ್ತು ನಾಗರಿಕ ಸೇವೆಗಳ ಬಗ್ಗೆ ಗಮನ ಹರಿಸಲಾಗುತ್ತಿದೆ ಎಂದರು.