ನವದೆಹಲಿ : ಕೇಂದ್ರ ಸರ್ಕಾರವು ದುರ್ಬಲ ವರ್ಗದವರಿಗೆ ಭರ್ಜರಿ ಸಿಹಿಸುದ್ದಿ ನೀಡಲು ಮುಂದಾಗಿದ್ದು, ಅಡುಗೆ ಅನಿಲ (LPG) ಸಬ್ಸಿಡಿಯನ್ನು ದುರ್ಬಲ ವರ್ಗಗಳಿಗೆ ಮಾತ್ರ ಪುನಾರಂಭಸುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಎಲ್ ಪಿಜಿ ಸಬ್ಸಿಡಿ ಯೋಜನೆ ದುರ್ಬಲ ವರ್ಗದವರಿಗೆ ಮಾತ್ರ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದ್ದು, ಈಗಾಗಲೇ ಎಲ್ ಪಿಜಿ ಸಬ್ಸಿಡಿ ಯೋಜನೆಯನ್ನು ಪರಿಶೀಲನೆಗೆ ಒಳಪಡಿಸಲು ನಿರ್ಧರಿಸಿದೆ ಎನ್ನಲಾಗಿದೆ.
ಎಲ್ ಪಿಜಿ ದರ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಕಳೆದೊಂದು ವರ್ಷದಿಂದ ಎಲ್ ಪಿಜಿ ಸಬ್ಸಿಡಿಯನ್ನು ತಡೆಹಿಡಿಯಲಾಗಿತ್ತು. ಇದೀಗ ದುರ್ಬಲ ವರ್ಗದವರಿಗೆ ಮಾತ್ರ ಸಬ್ಸಡಿ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ.