ದೆಹಲಿ

ಕೇಂದ್ರ ಸರ್ಕಾರ : ಭತ್ತ ಖರೀದಿಗೂ ಮುನ್ನ ರೈತರ ಭೂಮಿ ದಾಖಲೆಗಳನ್ನು ಪರಿಶೀಲನೆ ನಡೆಸಲು ನಿರ್ಧರ

ನವದೆಹಲಿ: ಕನಿಷ್ಟ ಬೆಂಬಲ ಬೆಲೆ ರೈತರಿಗೇ ಸಿಗುತ್ತಿದೆ ಎಂಬುದನ್ನು ಖಾತ್ರಿಪಡಿಸಿಕೊಳ್ಳುವುದಕ್ಕೆ ಕೇಂದ್ರ ಸರ್ಕಾರ ವಿನೂತನ ಕ್ರಮ ಕೈಗೊಂಡಿದ್ದು, ಭತ್ತ ಖರೀದಿಗೂ ಮುನ್ನ ರೈತರ ಭೂಮಿ ದಾಖಲೆಗಳನ್ನು ಪರಿಶೀಲನೆ ನಡೆಸಲು ನಿರ್ಧರಿಸಿದೆ. ಅಕ್ಟೋಬರ್ ನಿಂದ ಈ ವ್ಯವಸ್ಥೆ ಜಾರಿಯಾಗಲಿದೆ.

ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ ಈ ಬಗ್ಗೆ ಮಾಹಿತಿ ನೀಡಿದ್ದು, ಜಮ್ಮು-ಕಾಶ್ಮೀರ, ಉತ್ತರಾಖಂಡ್, ಅಸ್ಸಾಂನ್ನು ಹೊರತುಪಡಿಸಿ ಉಳಿದೆಲ್ಲಾ ರಾಜ್ಯಗಳೂ ಈ ಮಾದರಿಯನ್ನು ಅನುಸರಿಸಲು ಸಿದ್ಧವಾಗಿದ್ದು, ಇಂಟಿಗ್ರೇಟೆಡ್ ಡಿಜಿಟಲ್ ಭೂ ದಾಖಲೆಗಳನ್ನು ಕೇಂದ್ರ ದ ನೋಡಲ್ ಖರೀದಿ ಸಂಸ್ಥೆ ಭಾರತೀಯ ಆಹಾರ ನಿಗಮ (ಎಫ್ ಸಿಐ) ಜೊತೆ ಹಂಚಿಕೊಳ್ಳುವುದಕ್ಕೆ ಸಿದ್ಧವಿದೆ ಎಂದು ವರದಿಗಾರರಿಗೆ ತಿಳಿಸಿದ್ದಾರೆ.

ರೈತರ ಹಿತಾಸಕ್ತಿಗಾಗಿ ಈ ಹೊಸ ವ್ಯವಸ್ಥೆಯನ್ನು ಜಾರಿಗೊಳಿಸುತ್ತಿದ್ದು, ರೈತರು ತಮ್ಮ ಸ್ವಂತ ಜಾಗ ಅಥವಾ ಬಾಡಿಗೆಗೆ ಪಡೆದ ಜಾಗದಲ್ಲಿ ಬೆಳೆದ ಭತ್ತವನ್ನು ಸರ್ಕಾರ ಖರೀದಿಸಲಿದೆ ಎಂದು ಹೇಳಿದ್ದಾರೆ. “ರೈತರು ತಮ್ಮದೇ ಭೂಮಿಯಲ್ಲಿ ಭತ್ತ ಬೆಳೆದಿರಬೇಕೆಂದೇನೂ ಇಲ್ಲ. ಅವರ ಬೆಳೆಯನ್ನು ಗುತ್ತಿಗೆ ಆಧಾರದಲ್ಲಿ ಪಡೆದ ಭೂಮಿಯಲ್ಲಿ ಬೆಳೆದಿದ್ದರೂ ಅದನ್ನು ಖರೀದಿಸಲಾಗುತ್ತದೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಎಷ್ಟು ಪ್ರದೇಶದಲ್ಲಿ ಎಷ್ಟು ಪ್ರಮಾಣದ ಬೆಳೆ ಬೆಳೆಯಲಾಗಿದೆ ಎಂಬುದನ್ನು ತಿಳಿದು ಅದನ್ನು ಖರೀದಿಸುವುದು ಈ ವ್ಯವಸ್ಥೆಯ ಮೂಲ ಉದ್ದೇಶವಾಗಿದೆ, ಎಫ್ ಸಿಐ ಬಳಿ ಇರುವ ಇಂಟಿಗ್ರೇಟೆಡ್ ಲ್ಯಾಂಡ್ ರೆಕಾರ್ಡ್ಸ್ ಗಳು ಈ ಹಂತದಲ್ಲಿ ಸಹಾಯಕ್ಕೆ ಬರಲಿವೆ ಎಂದು ಸುಧಾಂಶು ಪಾಂಡೆ ಹೇಳಿದ್ದಾರೆ.

ಕಾರ್ಯದರ್ಶಿಗಳು ನೀಡಿರುವ ಮಾಹಿತಿಯ ಪ್ರಕಾರ ಪಂಜಾಬ್ ಸೇರಿದಂತೆ ಹಲವು ರಾಜ್ಯಗಳು ಈ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವುದಕ್ಕೆ ಸಜ್ಜುಗೊಂಡಿವೆ, ಪ್ರತಿ ರಾಜ್ಯವೂ ತಾನು ಖರೀದಿಸುವುದರಿಂದ ರೈತರಿಗೆ ಲಾಭವಾಗುವುದನ್ನು ಬಯಸುತ್ತವೆಯೇ ಹೊರತು ಟ್ರೇಡರ್ ಗಳನ್ನಲ್ಲ.

ಈ ವ್ಯವಸ್ಥೆಯಿಂದ ಕನಿಷ್ಟ ಬೆಂಬಲ ಬೆಲೆ ರೈತರಿಗೆ ಮಾತ್ರ ತಲುಪುವಂತಾಗುತ್ತದೆ. ಟ್ರೇಡರ್ ಗಳಿಗಲ್ಲ ಎಂದು ಸುಧಾಂಶು ಪಾಂಡೆ ತಿಳಿಸಿದ್ದಾರೆ.

Sneha Gowda

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

21 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

46 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago