News Karnataka Kannada
Saturday, May 11 2024
ದೆಹಲಿ

ಕೊರೊನಾ ಪ್ರಕರಣ ಹೆಚ್ಚಳ ಹಿನ್ನೆಲೆ, ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಮಹತ್ವದ ಸಭೆ

Narendra Modi
Photo Credit :

ನವದೆಹಲಿ : ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಭಾರಿ ಹೆಚ್ಚಳವಾಗುತ್ತಿರುವ ಹಿನ್ನೆಲೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಸಭೆ ನಡೆಸಲಿದ್ದಾರೆ.

ಸಂಜೆ 4:30 ಕ್ಕೆ ಪ್ರಧಾನಿ ಮೋದಿ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಎಲ್ಲಾ ರಾಜ್ಯಗಳ ಸಿಎಂ ಗಳ ಜೊತೆ ಚರ್ಚೆ ನಡೆಸಲಿದ್ದು, ಸಭೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ತೆಗೆದುಕೊಳ್ಳಬಹುದಾದ ಕಠಿಣ ಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.ಸಭೆಯಲ್ಲಿ ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದಾರೆ.

ಎಲ್ಲಾ ರಾಜ್ಯಗಳ ಸಿಎಂಗಳಿಂದ ಕೊರೊನಾ ಅಂಕಿಅಂಶ, ಸ್ಥಿತಿಗತಿ ಬಗ್ಗೆ ಮೋದಿ ಮಾಹಿತಿ ಪಡೆಯಲಿದ್ದು, ಬಳಿಕ ಕಠಿಣ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ಕೊರೊನಾ ನಿಯಂತ್ರಣಕ್ಕೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಏನಾದರೂ ಕಠಿಣ ಕ್ರಮ ಕೈಗೊಳ್ಳಲಿದೆಯಾ ಎಂಬುದನ್ನು ಕಾದು ನೋಡಬೇಕಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು