ನವದೆಹಲಿ: ಕೋವಿಡ್ನ ಎಲ್ಲಾ ಲಸಿಕೆಗಳು ಸೋಂಕನ್ನು ತಡೆಯುವುದಿಲ್ಲ.ಈ ಲಸಿಕೆಗಳು ಪ್ರಾಥಮಿಕ ಹಂತದಲ್ಲಿ ರೋಗದ ತೀವ್ರತೆಯನ್ನು ತಗ್ಗಿಸಲು ಹಾಗೂ ಆಸ್ಪತ್ರೆಗೆ ದಾಖಲಾಗುವವರು ಮತ್ತು ಮರಣದ ಪ್ರಮಾಣವನ್ನು ಕಡಿಮೆ ಮಾಡುತ್ತದೆಯೇ ಹೊರತು ಸೋಂಕನ್ನು ತಡೆಯುವುದಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಮಹಾನಿರ್ದೇಶಕ ಡಾ. ಬಲರಾಮ ಭಾರ್ಗವ ಹೇಳಿದ್ದಾರೆ.
ಅವು ಸೋಂಕನ್ನು ತಡೆಯುವುದಿಲ್ಲ.ಅವು ಪ್ರಾಥಮಿಕ ಹಂತದಲ್ಲಿಯೇ ಸೋಂಕನ್ನು ಮಾರ್ಪಾಡು ಮಾಡುತ್ತವೆ ಎಂದು ಹೇಳಿದರು.
ಕೊರೊನಾ ಲಸಿಕೆಗಿಂತ ಮುನ್ನ ಹಾಗೂ ಲಸಿಕೆ ಸ್ವೀಕರಿಸಿದ ಬಳಿಕ ಮಾಸ್ಕ್ಗಳನ್ನು ಧರಿಸುವುದು ಅನಿವಾರ್ಯವಾಗಿದೆ. ಜನದಟ್ಟಣೆಯ ಸ್ಥಳಗಳಿಗೆ ಯಾವುದೇ ಕಾರಣಕ್ಕೂ ತೆರಳಬಾರದು. ಈ ಹಿಂದಿನ ಅಥವಾ ಈಗಿರುವ ಕೊರೊನಾದ ಯಾವುದೇ ತಳಿಗಳಿಗೆ ಕೊರೊನಾ ಮಾರ್ಗಸೂಚಿಗಳು ಒಂದೇ ಆಗಿದೆ. ಈಗಲೂ ಕೂಡ ಹೋಂ ಐಸೋಲೇಷನ್ ಎನ್ನುವುದು ಪ್ರಮುಖ ಆಧಾರ ಸ್ತಂಭವಾಗಿದೆ ಎಂದು ಬಲರಾಮ ಭಾರ್ಗವ ಹೇಳಿದರು.
ಈ ವಿಚಾರವಾಗಿ ಮಾತನಾಡಿದ ಐಸಿಎಂಆರ್ ಡಿಜಿ ಬಲರಾಮ ಭಾರ್ಗವ, ಭಾರತದ್ದೇ ಆಗಿರಲಿ ಅಥವಾ ಇಸ್ರೆಲ್, ಅಮೆರಿಕ, ಯುರೋಪ್, ಬ್ರಿಟನ್, ಚೀನಾ ಹೀಗೆ ಯಾವುದೇ ದೇಶದ್ದಾಗಿರಲಿ ಅವು ಪ್ರಾಥಮಿಕವಾಗಿ ರೋಗವನ್ನು ಮಾರ್ಪಾಡು ಮಾಡುತ್ತವೆ.
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…
ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.
ಬಸ್ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್ಪ್ರೆಸ್ ವೇಯಲ್ಲಿ…
ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್ಸಿಎಲ್ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…
ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್ ನೀಡುತ್ತೇವೆ…
ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…