News Karnataka Kannada
Monday, April 29 2024
ದೆಹಲಿ

ಕೋವಿಡ್ ನಿರ್ಬಂಧಗಳನ್ನು ಸಡಿಲಿಸುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸಲಹೆ

Covid 19
Photo Credit :

ನವದೆಹಲಿ:ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಸಾಮಾಜಿಕ, ಕ್ರೀಡೆ, ಮನರಂಜನೆ, ಶೈಕ್ಷಣಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ವಿಧಿಸಲಾಗಿರುವ ನಿರ್ಬಂಧಗಳನ್ನು ಸಡಿಲಿಸುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.

ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಕಳುಹಿಸಲಾದ ಮಾರ್ಗಸೂಚಿಗಳಲ್ಲಿ, ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು, ಕೈ ನೈರ್ಮಲ್ಯ ಮತ್ತು ಒಳಾಂಗಣದಲ್ಲಿ ಸುರಕ್ಷತಾ ಕ್ರಮಗಳನ್ನು ಪಾಲನೆ ಮಾಡುವಂತೆ ಸಲಹೆ ನೀಡಲಾಗಿದೆ.

ಸ್ಥಳೀಯ ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ವಿಶ್ಲೇಷಿಸಿದ ನಂತರ, ಸಾಮಾಜಿಕ, ಕ್ರೀಡೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ, ಹಬ್ಬಕ್ಕೆ ಸಂಬಂಧಿಸಿದ ವಿವಿಧ ಚಟುವಟಿಕೆಗಳಲ್ಲಿ ಅನುಮತಿ ನೀಡಬಹುದು.

ಮಾರ್ಚ್‍ವರೆಗೂ ಅನ್ವಯವಾಗುವಂತೆ ಕೋವಿಡ್ ಮಾರ್ಗಸೂಚಿಗಳನ್ನು ವಿಧಿಸಲಾಗಿತ್ತು. ಆದರೆ ಪ್ರಸ್ತುತ ಕೋವಿಡ್ ಸಂಖ್ಯೆಗಳು ಕ್ಷೀಣಿಸಿವೆ. ಹಾಗಾಗಿ ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿ ಅಜಯ್ ಭಲ್ಲಾ, ಕೇಂದ್ರ ಆರೋಗ್ಯ ಸಚಿವಾಲಯದ ಸಲಹೆಯಂತೆ ಆರ್ಥಿಕ ಚಟುವಟಿಕೆಗಳನ್ನು ಮುಕ್ತವಾಗಿಸುವ ಸಲಹೆ ನೀಡಿದ್ದರು.

ರಾತ್ರಿ ಕಫ್ರ್ಯೂ, ಸಾರ್ವಜನಿಕ ಸಾರಿಗೆಯ ಕಾರ್ಯಾಚರಣೆಗಳು, ಶಾಪಿಂಗ್ ಸಂಕೀರ್ಣಗಳು, ಸಿನಿಮಾ ಹಾಲ್‍ಗಳು, ಜಿಮ್‍ಗಳು, ಸ್ಪಾಗಳು, ರೆಸ್ಟೋರೆಂಟ್‍ಗಳು ಮತ್ತು ಬಾರ್‍ಗಳು, ಶಾಲಾ-ಕಾಲೇಜುಗಳು, ಕಚೇರಿಗಳು ಮತ್ತು ಇತರ ವಾಣಿಜ್ಯ ಚಟುವಟಿಕೆಗಳನ್ನು ಮುಕ್ತವಾಗಿಸುವಂತೆ ಸೂಚಿಸಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು