ನವದೆಹಲಿ: ದೆಹಲಿಯಲ್ಲಿ ಬರ್ಬರ ಘಟನೆಯೊಂದು ನಡೆದಿದೆ. ಯುವಕನೊಬ್ಬನ ಮೇಲೆ ಕೆಲವರು ಮನಬಂದಂತೆ ಬೆಲ್ಟ್ ಮತ್ತು ದೊಣ್ಣೆಗಳಿಂದ ಹಲ್ಲೆ ನಡೆಸಿದ್ದು, ಇದೀಗ ಹಲ್ಲೆಗೊಳಗಾದ ಯುವಕ ಸಾವನ್ನಪ್ಪಿದ್ದಾನೆ. ದೆಹಲಿಯ ದಾಬ್ರಿ ಪ್ರದೇಶದಲ್ಲಿ ಏಪ್ರಿಲ್ 23 ರಂದು ಈ ಘಟನೆ ನಡೆದಿದ್ದು, ಏಪ್ರಿಲ್ 26 ರಂದು ಯುವಕ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಯುವಕನನ್ನು ಕೃಷ್ಣ ಎಂದು ಗುರುತಿಸಲಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಕೃಷ್ಣನನ್ನು ಗುಂಪೊಂದು ಬೆಲ್ಟ್ ಮತ್ತು ದೊಣ್ಣೆಗಳಿಂದ ಅಮಾನುಷವಾಗಿ ಥಳಿಸಿದ್ದಾರೆ.
ಹೋಳಿ ಹಬ್ಬದಂದು ಕೃಷ್ಣ ಮತ್ತೋರ್ವ ವ್ಯಕ್ತಿ ಸೂರಜ್ ಜೊತೆ ಜಗಳ ಮಾಡಿಕೊಂಡಿದ್ದ. ಇದನ್ನು ಮನಸ್ಸಿನಲ್ಲಿಟ್ಟುಕೊಂಡು ಸೂರಜ್ ತನ್ನ ಸ್ನೇಹಿತರೊಂದಿಗೆ ಏಪ್ರಿಲ್ 23 ರಂದು ದಾಬ್ರಿ ಪ್ರದೇಶದಲ್ಲಿ ಕೃಷ್ಣನ ಮೇಲೆ ಹಲ್ಲೆ ನಡೆಸಿದ್ದನು. ಅವರು ಗಂಭೀರವಾಗಿ ಗಾಯಗೊಂಡಿದ್ದರು. ಈ ವೇಳೆ ತೀವ್ರವಾಗಿ ಗಾಯಗೊಂಡ ಕೃಷ್ಣನನ್ನು ಸಫ್ದರ್ಜಂಗ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ಕೃಷ್ಣನಿಗೆ ಚಿಕಿತ್ಸೆ ಫಲಕಾರಿಯಾಗದೇ ಏಪ್ರಿಲ್ 26 ರಂದು ನಿಧನರಾದರು ಎನ್ನಲಾಗಿದೆ.
ಪೊಲೀಸರು ಐವರನ್ನು ಬಂಧಿಸಿದ್ದು, ನಾಲ್ವರು ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದಾರೆ.