ನವದೆಹಲಿ : ನವದೆಹಲಿಯ ಗಾಜಿಪುರ ಹೂವಿನ ಮಾರುಕಟ್ಟೆ ಯಲ್ಲಿ ಸುಧಾರಿತ ಸ್ಫೋಟಕ ಸಾಧನವನ್ನ ದೆಹಲಿ ಪೊಲೀಸರು ಶುಕ್ರವಾರ ವಶಪಡಿಸಿಕೊಂಡಿದ್ದಾರೆ.
ಬಾಂಬ್ ನಿಷ್ಕ್ರಿಯ ದಳವನ್ನ ಪೂರ್ವ ದೆಹಲಿಯ ಗಾಜಿಪುರ ಹೂವಿನ ಮಾರುಕಟ್ಟೆಗೆ ಕರೆದೊಯ್ದ ದೆಹಲಿ ಪೊಲೀಸರು, ‘ಪಡೆದ ಮಾಹಿತಿಯ ಆಧಾರದ ಮೇಲೆ ಐ.ಐ.ಡಿ.ಯನ್ನ ವಶಪಡಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಆಯುಕ್ತ ರಾಕೇಶ್ ಅಸ್ತಾನಾ ತಿಳಿಸಿದ್ದಾರೆ.
ಅಂದ್ಹಾಗೆ, ಗಾಜಿಪುರ ಹೂವಿನ ಮಾರುಕಟ್ಟೆಯಲ್ಲಿ ಗಮನಿಸದ ಚೀಲದ ಬಗ್ಗೆ 10.20ರ ಸುಮಾರಿಗೆ ಕರೆ ಸ್ವೀಕರಿಸಲಾಗಿದೆ ಎಂದು ಅಗ್ನಿಶಾಮಕ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಂತರ ಒಂದು ಅಗ್ನಿಶಾಮಕ ಎಂಜಿನ್ʼನನ್ನ ಸ್ಥಳಕ್ಕೆ ಸಾಗಿಸಲಾಯಿತು. ಇನ್ನು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ತಂಡ ಮತ್ತು ಬಾಂಬ್ ನಿಷ್ಕ್ರಿಯ ದಳದ ತಂಡವೂ ಸ್ಥಳದಲ್ಲಿದೆ.