News Karnataka Kannada
Sunday, April 28 2024
ದೆಹಲಿ

ಗೋಧಿ ರಫ್ತಿನ ಮೇಲೆ ನಿರ್ಬಂಧ ಸಡಿಲಿಸಿದ ಕೇಂದ್ರ

Untitled 1
Photo Credit :

ನವದೆಹಲಿ : ಉತ್ಪಾದನೆ ಇಳಿಕೆಯಾದ ಹಿನ್ನೆಲೆಯಲ್ಲಿ ಭಾರತವು ಗೋಧಿ ರಫ್ತಿಗೆ ನಿಷೇಧ ಹೇರಿತ್ತು. ಆದರೆ ನಿಷೇಧ ಹೇರುವುದಕ್ಕೂ ಮುನ್ನವೇ ಕಸ್ಟಮ್ಸ್ ಪ್ರಾಧಿಕಾರದಲ್ಲಿ ನೋಂದಾಯಿಸಲಾದ ನಿಗದಿತ ಪ್ರಮಾಣದ ಗೋಧಿಯನ್ನು ರಫ್ತು ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಮೇ 13ಕ್ಕೂ ಮುನ್ನವೇ ಕಸ್ಟಮ್ಸ್ ವ್ಯವಸ್ಥೆಗಳಲ್ಲಿ ನೋಂದಾಯಿಸಲಾಗಿದ್ದು, ಅಂತಹ ಸರಕುಗಳನ್ನು ರಫ್ತು ಮಾಡಲು ಕೇಂದ್ರ ಸರ್ಕಾರ ಅನುಮತಿಸಿದೆ ಎಂದು ವಾಣಿಜ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಜೊತೆಗೆ ಗೋಧಿ ರಫ್ತು ಮಾಡಲು ತೊಡಗಿರುವ ಮೇರಾ ಇಂಟರ್‌ನ್ಯಾಶನಲ್ ಇಂಡಿಯಾ ಪ್ರೈ.ಲಿ. ಈಜಪ್ಟ್‌ 61,500 ಮೆಟ್ರಿಕ್ ಟನ್ ಲೋಡ್ ಗೋಧಿ ರಫ್ತಿಗೆ ಅನುಮತಿ ನೀಡಿದೆ. ಅದರಲ್ಲಿ 44,340 ಮೆಟ್ರಿಕ್ ಟನ್ ಈಗಾಗಲೇ ಲೋಡ್ ಮಾಡಲಾಗಿದೆ. ಇನ್ನು 17,160 ಮೆಟ್ರಿಕ್ ಟನ್ ಮಾತ್ರ ಬಾಕಿ ಉಳಿದಿದೆ. ಕೇಂದ್ರ ಸರ್ಕಾರ ಪೂರ್ಣ ಪ್ರಮಾಣದ ಗೋಧಿಯನ್ನು ಸರಬರಾಜು ಮಾಡಲು ನಿರ್ಧರಿಸಿದೆ ಎಂದು ಹೇಳಿದೆ.

ರಫ್ತಿಗೆ ನಿಷೇಧ ಹೇರಿದ್ದು ಏಕೆ ?: ಭಾರತದಲ್ಲಿ ಉಷ್ಣತೆಯಲ್ಲಿ ಏರಿಕೆ ಕಂಡಿದ್ದರಿಂದ ಗೋಧಿ ಉತ್ಪಾದನೆಗೆ ಹೊಡೆತ ಬಿದ್ದಿತ್ತು. ಇದರ ಜೊತೆಗೆ ಕಡಿಮೆ ಉತ್ಪಾದನೆ ಮತ್ತು ಜಾಗತಿಕ ಬೆಲೆಗಳು ತೀವ್ರವಾಗಿ ಹೆಚ್ಚಿರುವುದು ಸೇರಿದಂತೆ ತನ್ನದೇ ಆದ 1.4 ಶತಕೋಟಿ ಜನರ ಆಹಾರ ಭದ್ರತೆಯ ಬಗ್ಗೆ ಭಾರತ ಚಿಂತಿಸಿತ್ತು. ಇದರಿಂದಾಗಿ ರಫ್ತು ವ್ಯಾಪಾರಕ್ಕೆ ನಿಷೇಧದ ನಿರ್ಧಾರವನ್ನು ತೆಗೆದುಕೊಂಡಿತ್ತು.

ಭಾರತದ ಈ ನಿರ್ಧಾರವನ್ನು US, ಕೆನಡಾ, EU ಮತ್ತು ಆಸ್ಟ್ರೇಲಿಯಾ ಸೇರಿದಂತೆ ಅನೇಕ ಪಾಶ್ಚಿಮಾತ್ಯ ರಾಷ್ಟ್ರಗಳು ತರಾಟೆಗೆ ತೆಗೆದುಕೊಂಡಿದೆ. ಆದರೆ ಭಾರತದಲ್ಲಿ ಗೋಧಿಯ ರಫ್ತು ನಿಷೇಧ ಮಾಡಿರುವುದಕ್ಕೆ ಚೀನಾ ಬೆಂಬಲ ನೀಡಿದೆ. ಅಭಿವೃದ್ಧಿಶೀಲ ರಾಷ್ಟ್ರಗಳನ್ನು ದೂಷಿಸುವುದು ಸರಿಯಲ್ಲ. G7 ರಾಷ್ಟ್ರಗಳು ತಮ್ಮ ರಫ್ತುಗಳನ್ನು ಹೆಚ್ಚಿಸುವ ಮೂಲಕ ಆಹಾರ ಮಾರುಕಟ್ಟೆ ಪೂರೈಕೆಯನ್ನು ಸ್ಥಿರಗೊಳಿಸಲು ಏಕೆ ಮುಂದಾಗುವುದಿಲ್ಲ ಎಂದು ಚೀನಾ ಪ್ರಶ್ನಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು