News Karnataka Kannada
Monday, May 06 2024
ದೆಹಲಿ

ಚನ್ನಿ ಮೇಲೆ ಒತ್ತಡ ಹೇರಲು ಭೂಪಿಂದರ್ ಸಿಂಗ್ ಹನಿ ಅವರನ್ನು ಇ.ಡಿ ಬಂಧಿಸಿದೆ; ಮಲ್ಲಿಕಾರ್ಜುನ ಖರ್ಗೆ

Mallikarjuna Karge
Photo Credit :

ನವದೆಹಲಿ : ಪಂಜಾಬ್ ವಿಧಾನಸಭೆ ಚುನಾವಣೆಗೆ ಕೆಲ ದಿನಗಳು ಬಾಕಿ ಇರುವಾಗಲೇ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ಅವರ ಸೋದರಳಿಯ ಭೂಪಿಂದರ್ ಸಿಂಗ್ ಹನಿ ಅವರನ್ನು ಜಾರಿ ನಿರ್ದೇಶನಾಲಯವು(ಇ.ಡಿ) ಬಂಧಿಸಿದೆ.

ಈ ಬೆಳವಣಿಗೆಗೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್‌ ಪಕ್ಷವು, ಇದು ರಾಜಕೀಯ ಪ್ರೇರಿತ ಕೃತ್ಯವೆಂದು ಹರಿಹಾಯ್ದಿದೆ. ಈ ಬಗ್ಗೆ ಶುಕ್ರವಾರ ಪ್ರತಿಕ್ರಿಯಿಸಿರುವ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ‘ಇದು ರಾಜಕೀಯ ಪ್ರೇರಿತ ಬಂಧನ. ಚನ್ನಿ ಮೇಲೆ ಒತ್ತಡ ಹೇರಲು ಮಾಡಲಾಗಿದೆ’ ಎಂದು ಖಂಡಿಸಿದ್ದಾರೆ.

‘ಚನ್ನಿ ಅವರು ಪರಿಶಿಷ್ಟ ಜಾತಿಗೆ ಸೇರಿದ ಮುಖ್ಯಮಂತ್ರಿ. ಅವರ ನೈತಿಕತೆಯನ್ನು ಕುಗ್ಗಿಸಲು ಬಿಜೆಪಿ ಬಯಸಿದೆ’ ಎಂದು ಖರ್ಗೆ ಹೇಳಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು