ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವೇ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಲಾಗುವುದು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದರು.
ಮೂರೂ ಕೃಷಿ ಕಾಯ್ದೆಗಳನ್ನು ರದ್ದುಪಡಿಸಲು ನಿರ್ಧರಿಸಿರುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದು, ಕಾಯ್ದೆಗಳ ಅನುಕೂಲಗಳ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದ ಜಾನ್ಪುರದಲ್ಲಿ ಶನಿವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ನಾವು ರೈತರನ್ನು ದೇವರೆಂದು ಪರಿಗಣಿಸುತ್ತೇವೆ.
‘ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವೇ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಲಾಗುವುದು’ ಎಂದು ರಾಜನಾಥ್ ಸಿಂಗ್ ಭರವಸೆ ನೀಡಿದರು.
ಬಿಜೆಪಿ ಸರ್ಕಾರ ರೈತರ ಬಗ್ಗೆ ಸದಾ ಸಹಾನುಭೂತಿ ಹೊಂದಿದೆ. ಮೂರು ಕಾನೂನುಗಳ ವಿರುದ್ಧ ಹೋರಾಟ ನಡೆಯಿತು. ಆ ಹಿನ್ನೆಲೆಯಲ್ಲಿ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ಪ್ರಧಾನಿ ಮೋದಿ ಮಾಡಿದ್ದಾರೆ’ ಎಂದು ಹೇಳಿದರು.
ಸದ್ಯದಲ್ಲೇ ಆರಂಭವಾಗಲಿರುವ ಸಂಸತ್ ಅಧಿವೇಶನದಲ್ಲಿ ಮೂರು ಕೃಷಿ ಕಾಯ್ದೆಗಳ ರದ್ದತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತೇವೆ ಎಂದೂ ಪ್ರಧಾನಿ ತಿಳಿಸಿದ್ದಾರೆ.
ಕೋವಿಡ್ನಿಂದಾಗಿ ಕಳೆದ ವರ್ಷ ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ನಡೆಸಿರಲಿಲ್ಲ. ಅಲ್ಲದೆ ಬಜೆಟ್ ಮತ್ತು ಮುಂಗಾರು ಅಧಿವೇಶನದ ಅವಧಿಯನ್ನು ಕೂಡ ಕಡಿಮೆ ಮಾಡಲಾಗಿತ್ತು.