News Karnataka Kannada
Friday, May 03 2024
ದೆಹಲಿ

ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜರ್ಮನ್‌ ಹೂಡಿಕೆದಾರರ ಆಹ್ವಾನ

Murugesh
Photo Credit :

 ನವದೆಹಲಿ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರು ಸೋಮವಾರ ನವದೆಹಲಿಯ ಜರ್ಮನ್ ರಾಯಭಾರ ಕಚೇರಿಯಲ್ಲಿ ಜರ್ಮನಿಯ ಫೆಡರಲ್ ರಿಪಬ್ಲಿಕ್ ಆಫ್ ಮಿಷನ್ ಡೆಪ್ಯೂಟಿ ಚೀಫ್ ಡಾ. ಸ್ಟೀಫನ್ ಗ್ರಾಭರ್ ಅವರನ್ನು ಭೇಟಿ ಮಾಡುವ ಮೂಲಕ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸುವಂತೆ ಜರ್ಮನ್ ಹೂಡಿಕೆದಾರರನ್ನು ‌ಆಹ್ವಾನಿಸಿದರು.

ಬೆಂಗಳೂರಿನಲ್ಲಿ ನವೆಂಬರ್ 2 ರಿಂದ 4 ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ಆಯೋಜಿಸಲಾಗಿದ್ದು, ರಾಜ್ಯದ ಕೈಗಾರಿಕಾಭಿವೃದ್ಧಿಗೆ ಭಾರೀ ಬಂಡವಾಳ ಹರಿದು ಬರುವ ನಿರೀಕ್ಷೆ ಮಾಡಲಾಗಿದೆ.

ಈ ಸಂದರ್ಭದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಶ್ರೀ ಇ.ವಿ.ರಮಣ ರೆಡ್ಡಿ, ಕೈಗಾರಿಕಾ ಅಭಿವೃದ್ಧಿ ಆಯುಕ್ತೆ ಮತ್ತು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ನಿರ್ದೇಶಕರಾದ ಶ್ರೀ ಮತಿ ಗುಂಜನ್ ಕೃಷ್ಣ ‌ಅವರು ಈ ವೇಳೆ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು