Categories: ದೆಹಲಿ

ಜಾಲತಾಣದಲ್ಲಿ ಪ್ರತ್ಯಕ್ಷರಾಗಿ ನಾನು ಸತ್ತಿಲ್ಲ ಎಂದ ನಿಶಾ ದಹಿಯಾ

ಹರಿಯಾಣ: ಹರಿಯಾಣದ ಅಂತಾರಾಷ್ಟ್ರೀಯ ಮಟ್ಟದ ಕುಸ್ತೀಪಟು ನಿಶಾ ದಹಿಯಾ ಹಾಗೂ ಅವರ ಕುಟುಂಬದ ಮೇಲೆ ಎರಡು ದಿನಗಳ ಹಿಂದೆ ಭಯಾನಕ ಗುಂಡಿನ ದಾಳಿ ನಡೆದಿತ್ತು. ಈ ಸಮಯದಲ್ಲಿ ನಿಶಾ ಮತ್ತು ಸಹೋದರ ಮೃತಪಟ್ಟಿದ್ದರೆ, ಕುಟುಂಬಸ್ಥರು ಗಂಭೀರವಾಗಿ ಗಾಯಗೊಂಡಿದ್ದರು.

ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಹತ್ಯೆಯಾಗಿರುವ ನಿಶಾ ಅವರ ಫೋಟೋ ಸಹಿತ ಮಾಧ್ಯಮಗಳಲ್ಲಿ ವರದಿಯಾಗಿದ್ದವು. ಆದರೆ ಇದೀಗ ನಿಶಾ ದಹಿಯಾ ಜಾಲತಾಣದಲ್ಲಿ ಪ್ರತ್ಯಕ್ಷರಾಗಿ ಅಚ್ಚರಿ ಮೂಡಿಸಿದ್ದಾರೆ. ನಿಶಾ ದಹಿಯಾ ಗುಂಡಿನ ದಾಳಿಯಲ್ಲಿ ಸತ್ತಿದ್ದು ನಿಜ. ಆಕೆ ರಾಷ್ಟ್ರೀಯ ಮಟ್ಟದ ಕುಸ್ತಿ ಪಟು ಕೂಡ ಹೌದು. ಆದರೆ ಆಕೆ ನಾನಲ್ಲ ಎಂದಿದ್ದಾರೆ!

ಇದರಿಂದ ಜನರು ಗಲಿಬಿಲಿಗೊಂಡಿದ್ದಂತೂ ನಿಜ. ಅಷ್ಟಕ್ಕೂ ಆಗಿರುವುದು ಏನೆಂದರೆ ಹರಿಯಾಣದಲ್ಲಿ ಇಬ್ಬರು ನಿಶಾ ದಹಿಯಾ ಇದ್ದು, ಇಬ್ಬರೂ ಅಂತಾರಾಷ್ಟ್ರೀಯ ಮಟ್ಟದ ಕುಸ್ತಿಪಟುಗಳೇ ಆಗಿರುವುದು ಇಷ್ಟೆಲ್ಲಾ ಗೊಂದಲಕ್ಕೆ ಕಾರಣವಾಗಿದೆ. ಬದುಕಿರುವ ನಿಶಾ ದಹಿಯಾ ಅವರ ಫೋಟೋಗಳನ್ನು ಹಾಕಿ ಅವರ ಹತ್ಯೆ ಎಂದು ಬರೆಯಲಾಗಿತ್ತು.

ಅದಕ್ಕೆ ಅವರು, ‘ಪ್ಲೀಸ್‌ ಈವಿಷಯ ನಂಬಿ, ಸರಿಯಾಗಿ ಕೇಳಿ. ನನ್ನ ಮೇಲೆ ಗುಂಡಿನ ದಾಳಿ ಆಗಿಲ್ಲ. ನನ್ನ ಕುಟುಂಬದ ಜತೆ ಸುರಕ್ಷಿತವಾಗಿದ್ದೇನೆ. ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಕ್ಕಾಗಿ ಸದ್ಯ ಗೊಂಡಾಕ್ಕೆ ಬಂದಿದ್ದೇನೆ. ಗುಂಡಿನಲ್ಲಿ ಮೃತಪಟ್ಟಿದ್ದು, ಯು-23 ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಕಂಚು ಗೆದ್ದವರು. ಅವರು ನಾನಲ್ಲ. ಇಬ್ಬರ ಹೆಸರೂ ಒಂದೇ ಆಗಿದ್ದ ಕಾರಣ ಈ ಗೊಂದವಾಗಿದೆ. ಅದ್ದರಿಂದ ಸತ್ತಿದ್ದು ನಾನಲ್ಲ’ ಎಂದಿದ್ದಾರೆ.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

7 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

7 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

8 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

8 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

9 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

9 hours ago