ನವದೆಹಲಿ: ತಿರುಮಲದಲ್ಲಿರುವ ತಿರುಪತಿ ವೆಂಕಟೇಶ್ವರ ದೇಗುಲ ಸನ್ನಿಧಾನದಲ್ಲಿ ನೀಡಲಾಗುವ ಸ್ಲಾಟೆಡ್ ಸರ್ವ ದರ್ಶನಂ (ಎಸ್ಎಸ್ಡಿ) ಟೋಕನ್ಗಳ ಸಂಖ್ಯೆಯನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ.ಕೊರೊನಾ ಸೋಂಕು ಸಂಖ್ಯೆಯಲ್ಲಿ ಇಳಿಮುಖವಾದ್ದರಿಂದ ಆಡಳಿತ ಮಂಡಳಿ, ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಈ ನಿರ್ಧಾರ ಕೈಗೊಂಡಿದೆ.
ಫೆ. 24ರಿಂದ 28ರ ಅವಧಿಯಲ್ಲಿ ದರ್ಶನ ಪಡೆಯಲಿಚ್ಛಿಸುವವರಿಗೆ, ದಿನಂಪ್ರತಿ ಪ್ರಮಾಣಕ್ಕಿಂತ ಹೆಚ್ಚುವರಿಯಾಗಿ 13,000 ಎಸ್ಎಸ್ಡಿ ಟೋಕನ್ಗಳನ್ನು ನೀಡಲು ನಿರ್ಧರಿಸಲಾಗಿದೆ.
ಫೆ. 26ರಿಂದ 28ರ ಅವಧಿಯಲ್ಲಿ ದರ್ಶನ ಪಡೆಯಲು ಇಚ್ಛಿಸುವವರಿಗೆ, ಭೂದೇವಿ ಕಾಂಪ್ಲೆಕ್ಸ್, ಶ್ರೀನಿವಾಸಂ ಕಾಂಪ್ಲೆಕ್ಸ್ ಹಾಗೂ ಶ್ರೀ ಗೋವಿಂದರಾಜ ಸ್ವಾಮಿ ಚೌಲಿಗಳಲ್ಲಿ ನೀಡಲಾಗುವ ದಿನಂಪ್ರತಿ ಎಸ್ಎಸ್ಡಿ ಟೋಕನ್ಗಳಿಗೆ ಹೆಚ್ಚುವರಿಯಾಗಿ 5,000 ಟೋಕನ್ಗಳನ್ನು ವಿತರಿಸಲು ನಿರ್ಧರಿಸಲಾಗಿದೆ.
ಆ ಮೂಲಕ ದಿನಂಪ್ರತಿ ಒಟ್ಟು 29,000 ಟೋಕನ್ಗಳನ್ನು ವಿತರಿಸಲು ತೀರ್ಮಾನಿಸಲಾಗಿದೆ.
25 ಸಾವಿರ ಟಿಕೆಟ್:
ಮಾರ್ಚ್ನಲ್ಲಿ ದರ್ಶನ ಪಡೆಯಲು ಇಚ್ಛಿಸುವವರಿಗೆ ದಿನಂಪ್ರತಿ ಮಾರಾಟ ಮಾಡಲಾಗುವ ಆನ್ಲೈನ್ ಟಿಕೆಟ್ಗಳ ಸಂಖ್ಯೆಯನ್ನೂ ಹೆಚ್ಚಿಸಲು ತೀರ್ಮಾನಿಸಲಾಗಿದ್ದು, ಪ್ರತಿ ದಿನ ಹೆಚ್ಚುವರಿಯಾಗಿ 25,0000 ಟಿಕೆಟ್ಗಳನ್ನು ನೀಡಲು ತೀರ್ಮಾನಿಸಲಾಗಿದೆ. ಪ್ರತಿ ಟಿಕೆಟ್ ಬೆಲೆ 300 ರೂ. ಆಗಿದ್ದು, ಬುಧವಾರ ಬೆ. 9ಗಂಟೆಯಿಂದ ಇವು ಟಿಟಿಡಿ ವೆಬ್ಸೈಟ್ನಲ್ಲಿ ಲಭ್ಯವಾಗಲಿವೆ.
ಜೂನ್ 2 ರಿಂದ 29 ರವರೆಗೆ ವೆಸ್ಟ್ ಇಂಡೀಸ್ ಮತ್ತು ಯುನೈಟೆಡ್ ಸ್ಟೇಟ್ಸ್ನಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ಗೆ ಭಯೋತ್ಪಾದಕರು…
ನೀರಿನ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಬೆಂಗಳೂರು ನಗರದಲ್ಲಿ ಶೀಘ್ರದ್ಲಲೇ ಬಿಯರ್ ಬಿಕ್ಕಟ್ಟು ಕೂಡ ಸೃಷ್ಟಿಯಾಗಬಹುದು ಎಂದು ಮಾರುಕಟ್ಟೆ ಮೂಲಗಳು ಅಂದಾಜಿಸಿದೆ.
ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಜನರು ಹೊಡೆದು ಕೊಂದಿರುವ ಘಟನೆ ಮೇಘಾಲಯ ದ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ…
ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ಹಂಚುವುದು ಶಿಕ್ಷಾರ್ಹ ಅಪರಾಧವಾಗಿದೆ ಎಸ್ಐಟಿ ಮುಖ್ಯಸ್ಥ…
ಮದುವೆಯಲ್ಲಿ ಐಸ್ ಕ್ರೀಂ ಸೇವಿಸಿದ 80ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ.ಸಾತನೂರು ಸರ್ಕಲ್ ಬಳಿಯ…
ಅಮೆರಿಕ ರಾಷ್ಟ್ರೀಯ ತಂಡದದಲ್ಲಿ ಏಕದಿನ ಮತ್ತು ಟ್ವೆಂಟಿ-20 ಕ್ರಿಕೆಟ್ ಪಂದ್ಯಗಳಲ್ಲಿ ಆಡಿರುವ ಕರ್ನಾಟಕದ ಮೂಡಿಗೆರೆಯ ಪ್ರತಿಭೆ ನಾಸ್ತುಷ್ ಪ್ರದೀಪ್, ಇದೇ…