News Karnataka Kannada
Sunday, April 28 2024
ದೆಹಲಿ

ತೈಲ ಬೆಲೆ ಏರಿಕೆಗೆ ಖಂಡಿಸಿ ಸೈಕಲ್ ಏರಿ ಪ್ರತಿಭಟನೆ ನಡೆಸಿದ ಸಂಸದ ಡಿ.ಕೆ.ಸುರೇಶ್

Dk Suresh 20072021
Photo Credit :

ನವದೆಹಲಿ: ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸಂಸದ ಡಿ.ಕೆ.‌ಸುರೇಶ್ ಯುವ ಕಾಂಗ್ರೆಸ್ ಮುಖಂಡರೊಂದಿಗೆ ಮಂಗಳವಾರ ಬೆಳಿಗ್ಗೆ ನವದೆಹಲಿಯಲ್ಲಿ ಸೈಕಲ್ ಮೂಲಕ ಸಂಸತ್ ಭವನಕ್ಕೆ ತೆರಳಿ ಪ್ರತಿಭಟಿಸಿದರು.

ಕೇಂದ್ರ ಸರ್ಕಾರ ಜನಸಾಮಾನ್ಯರ ಬಗ್ಗೆ ಆಲೋಚಿಸದೆ ತೈಲ ಬೆಲೆ ಹೆಚ್ಚಿಸುವ ಮೂಲಕ, ಬಡವರ ಬದುಕಿನೊಂದಿಗೆ ಚೆಲ್ಲಾಟ ಆಡುತ್ತಿದೆ ಎಂದು ಅವರು ಆರೋಪಿಸಿದರು.

ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲಗಳ ಮೇಲಿನ ತೆರಿಗೆ ಹೆಚ್ಚಿಸಿದ್ದರಿಂದ ಪೆಟ್ರೋಲ್ ಬೆಲೆ ಶತಕ ದಾಟಿದೆ. ಕೂಡಲೇ ಬೆಲೆ ಇಳಿಕೆ ಮಾಡಿ ಜನತೆಗೆ ಅನುಕೂಲ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದರು.

ಯುವ‌ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ‌ಬಿ.ವಿ. ಶ್ರೀನಿವಾಸ ಮಾತನಾಡಿ, ‘ತೈಲ ದರ ಏರಿಕೆಯಿಂದಾಗಿ ಜನರು ಕಾರುಗಳನ್ನು ಮೂಲೆಯಲ್ಲಿರಿಸಿ, ಸೈಕಲ್ ಏರುತ್ತಿದ್ದಾರೆ. ಅಂತೆಯೇ ನಾವೂ ಸಂಚರಿಸುವುದಕ್ಕೆ ಸೈಕಲ್‌ ಹತ್ತಿದ್ದೇವೆ’ ಎಂದು ಹೇಳಿದರು.

ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸಂದೀಪ್, ರಾಹುಲ್ ರಾಯ್ ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು