ದೆಹಲಿ : ದೆಹಲಿಯಲ್ಲಿ ವಾಯುಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಈ ವರ್ಷವೂ ಪಟಾಕಿ ಹಚ್ಚುವುದಕ್ಕೆ ನಿಷೇಧ ಹೇರಲಾಗಿದೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಕಳೆದ 3 ವರ್ಷಗಳಿಂದ ದೀಪಾವಳಿಯ ಸಮಯದಲ್ಲಿ ದೆಹಲಿಯ ಮಾಲಿನ್ಯದ ಅಪಾಯಕಾರಿ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಕಳೆದ ವರ್ಷದಂತೆ ಈ ವರ್ಷವೂ ಎಲ್ಲಾ ರೀತಿಯ ಪಟಾಕಿಗಳ ಸಂಗ್ರಹಣೆ, ಮಾರಾಟ ಮತ್ತು ಬಳಕೆಗೆ ಸಂಪೂರ್ಣ ನಿಷೇಧ ಹೇರಲಾಗುತ್ತಿದೆ. ಇದರಿಂದ ಜನರ ಜೀವ ಉಳಿಸಬಹುದು’ ಎಂದು ಹೇಳಿದ್ದಾರೆ
‘ಕಳೆದ ವರ್ಷ ವ್ಯಾಪಾರಿಗಳು ಪಟಾಕಿಗಳನ್ನು ಸಂಗ್ರಹಿಸಿದ ಬಳಿಕ ಮಾಲಿನ್ಯದ ಅಪಾಯವನ್ನು ಗಮನದಲ್ಲಿಟ್ಟುಕೊಂಡು ಸಂಪೂರ್ಣ ನಿಷೇಧವನ್ನು ಹೇರಲಾಗಿತ್ತು. ಇದರಿಂದ ವ್ಯಾಪಾರಿಗಳಿಗೆ ನಷ್ಟವುಂಟಾಗಿತ್ತು. ಈ ಬಾರಿ ಸಂಪೂರ್ಣ ನಿಷೇಧದ ದೃಷ್ಟಿಯಿಂದ, ಯಾವುದೇ ರೀತಿಯ ಶೇಖರಣೆಯನ್ನು ಮಾಡಬೇಡಿ’ ಎಂದು ಎಲ್ಲ ವ್ಯಾಪಾರಿಗಳಿಗೆ ಮನವಿ ಮಾಡಿದ್ದಾರೆ.