ಕೊರೋನಾ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿತರ ಚಿಕಿತ್ಸೆಗಾಗಿ ದೆಹಲಿ ಆರೋಗ್ಯ ಇಲಾಖೆಯು ʼಲೋಕನಾಯಕ್ ಜೈ ಪ್ರಕಾಶ್ ನಾರಾಯಣ್ʼ ಆಸ್ಪತ್ರೆಯನ್ನು ಮೀಸಲಾಗಿಟ್ಟಿದೆ.
ಓಮಿಕ್ರಾನನ್ ಸೋಂಕಿತರನ್ನು ಪ್ರತ್ಯೇಕವಾಗಿಸಲು ಮತ್ತು ಚಿಕಿತ್ಸೆ ನೀಡುವ ಸಲುವಾಗಿ ವಾರ್ಡ್ಗಳನ್ನು ನಿಗದಿಪಡಿಸಲು ಆಸ್ಪತ್ರೆಗೆ ಸೂಚಿಸಲಾಗಿದೆ.
ಹೊಸ ರೂಪಾಂತರಿ ಸೋಂಕು ತಗುಲಿರುವ ಯಾವುದೇ ಸೋಂಕಿತ ಕೂಡ ಯಾವುದೇ ಕಾರಣಕ್ಕೂ ಆಸ್ಪತ್ರೆಗಳ ಪ್ರವೇಶವನ್ನು ನಿರಾಕರಿಸಲಾಗುವುದಿಲ್ಲ ಎಂದು ಆರೋಗ್ಯ ಇಲಾಖೆ ಹೇಳಿದೆ.
ವಿಶ್ವ ಆರೋಗ್ಯ ಸಂಸ್ಥೆ ‘ಓಮಿಕ್ರಾನ್ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಈ ಹಿನ್ನೆಲೆ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೇಂದ್ರ ಆರೋಗ್ಯ ಸಚಿವಾಲಯವು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.