News Karnataka Kannada
Thursday, May 09 2024
ದೆಹಲಿ

ದೆಹಲಿಯಲ್ಲಿ ಚರಂಡಿಗೆ ಬಿದ್ದು ಉಸಿರುಗಟ್ಟಿ ನಾಲ್ವರು ಸಾವು

Death
Photo Credit :

ದೆಹಲಿ : ವಾಯುವ್ಯ ದೆಹಲಿಯ ಸಂಜಯ್ ಗಾಂಧಿ ಟ್ರಾನ್ಸ್‌ಪೋರ್ಟ್ ನಗರದಲ್ಲಿನ ಚರಂಡಿಯಿಂದ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿದೆ.

ಅಗ್ನಿಶಾಮಕ ಇಲಾಖೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಬುಧವಾರ ರಕ್ಷಣಾ ಕಾರ್ಯಾಚರಣೆ ನಡೆಸಿತು.ಎಂಟಿಎನ್‌ಎಲ್ ಲೈನ್‌ಗಳಲ್ಲಿ ಕೆಲಸ ಮಾಡುತ್ತಿದ್ದ ಮೂವರು ಗುತ್ತಿಗೆ ಕಾರ್ಮಿಕರು ಚರಂಡಿಗೆ ಬಿದ್ದಿದ್ದು, ಅವರನ್ನು ರಕ್ಷಿಸಲು ಪ್ರಯತ್ನಿಸಿದ ಓರ್ವ ಆಟೋ ಚಾಲಕ‌ ಕೂಡ ಮೃತನಾಗಿದ್ದಾನೆ.

ಪೊಲೀಸರ ಮಾಹಿತಿ ಪ್ರಕಾರ, ಘಟನೆಯ ಬಗ್ಗೆ ಸಮಯಪುರ ಬದ್ಲಿ ಪೊಲೀಸ್ ಠಾಣೆಗೆ ಸಂಜೆ 6.30 ರ ಸುಮಾರಿಗೆ ಮಾಹಿತಿ ಬಂದಿದೆ. ತಕ್ಷಣವೇ ಸ್ಥಳಕ್ಕೆ ದೌಡಾಯಿಸಲಾಯಿತು.

ಬಚ್ಚು ಸಿಂಗ್, ಪಿಂಟು ಮತ್ತು ಸೂರಜ್ ಕುಮಾರ್ ಸಾಹ್ನಿ ಮೃತರಾದವರು. ರಿಕ್ಷಾ ಚಾಲಕನನ್ನು ರೋಹಿಣಿ ಸೆಕ್ಟರ್ -16 ರ ಸರ್ದಾರ್ ಕಾಲೋನಿ ನಿವಾಸಿ ಸತೀಶ್ (38) ಎಂದು ಗುರುತಿಸಲಾಗಿದೆ. ಒಳಚರಂಡಿಯೊಳಗೆ ಎಂಟಿಎನ್‌ಎಲ್ ಲೈನ್ ಕೆಳಗೆ ಐರನ್ ನೆಟ್ ಇದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು