ಬೆಂಗಳೂರು,ಡಿ.13 : ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಜೀವನ ಚರಿತ್ರೆ ಮತ್ತು ಆಡಳಿತ ಅವಯ ಸಾಧನೆಗಳ ಕುರಿತ ಕೃತಿಯು ಇಂದು ಸಂಜೆ ನವದೆಹಲಿಯಲ್ಲಿ ಲೋಕಾರ್ಪಣೆಯಾಗಲಿದೆ.
ಖ್ಯಾತ ಪತ್ರಕರ್ತ ಸುಗತ ಶ್ರೀನಿವಾಸರಾಜು ಅವರು ರಚಿಸಿರುವ ಫರೋಸ್ ಇನ್ ಎ ಫೀಲ್ಡ್: ದ ಅನ್ಎಕ್ಸ್ ಫ್ಲೋ ರ್ಡ್ ಲೈಫ್ ಆಫ್ ಎಚ್.ಡಿ.ದೇವೇಗೌಡ ಎಂಬ ಕೃತಿಯನ್ನು ಖ್ಯಾತ ವಕೀಲ ಫಾಲಿ ಎಸ್.ನಾರಿಮನ್ ಅವರು ಲೋಕಾರ್ಪಣೆ ಮಾಡಲಿದ್ದಾರೆ.
ಇಂದು ಸಂಜೆ 6.30ಕ್ಕೆ ನವದೆಹಲಿಯ ಇಂಡಿಯ ಇಂಟರ್ ನ್ಯಾಷನಲ್ ಸೆಂಟರ್ನಲ್ಲಿ ಪ್ರಭಾ ಕೈತಾನ್ ಫೌಂಡೇಷನ್ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ದೇವೇಗೌಡರ ಕುರಿತ ಪುಸ್ತಕ ಬಿಡುಗಡೆಯಾಗಲಿದೆ. ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ, ಕೇಂದ್ರದ ಮಾಜಿ ಸಚಿವ ಜಯರಾಮ್ ರಮೇಶ್, ಸಂಸದ ಸೀತಾರಾಮ್ ಯಚೂರಿ ಅವರು ಪಾಲ್ಗೊಳ್ಳಲಿದ್ದಾರೆ.
ದೇವೇಗೌಡರು ಸಚಿವರಾಗಿ, ಮುಖ್ಯಮಂತ್ರಿಯಾಗಿ ಪ್ರಧಾನಿಯಾಗಿ ರಾಜ್ಯ ಹಾಗೂ ರಾಷ್ಟ್ರಕ್ಕೆ ನೀಡಿರುವ ಕೊಡುಗೆಗಳ ಕುರಿತ ವಿಚಾರವು ಪುಸ್ತಕದಲ್ಲಿ ಪ್ರತಿಬಿಂಬಿತವಾಗಿದೆ ಎಂದು ಗೌಡರ ಆಪ್ತ ಮೂಲಗಳು ತಿಳಿಸಿವೆ.