News Karnataka Kannada
Wednesday, May 01 2024
ದೆಹಲಿ

ದೇಶದಲ್ಲಿಂದು 2,259 ಹೊಸ ಕೇಸ್ ಪತ್ತೆ, 20 ಮಂದಿ ಸಾವು

ವಿವಿಧ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಆರು ಮಂದಿ ರೋಗಿಗಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ ಪಿ. ಸಿ ಕುಮಾರಸ್ವಾಮಿ ಹೇಳಿದ್ದಾರೆ.
Photo Credit :

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಏರಿಳಿಕೆ ಮುಂದುವರೆದಿದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 2,259 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 20 ಮಂದಿ ಸಾವನ್ನಪ್ಪಿದ್ದಾರೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,31,31,822ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,323ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 15,044ಕ್ಕೆ ಇಳಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 2,614 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,25,92,455ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ 4,51,179 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 84,58,55,351 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,91,96,32,518 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು