News Karnataka Kannada
Sunday, April 28 2024
ದೆಹಲಿ

ದೇಶದ್ರೋಹ ಕಾನೂನು ಅಡಿ ಪ್ರಕರಣ ದಾಖಲಿಸಲು ಸುಪ್ರೀಂ ಕೋರ್ಟ್ ತಡೆ

Untitled 1
Photo Credit :

ನವದೆಹಲಿ: ಕೇಂದ್ರ ಸರ್ಕಾರ ಮರುಪರಿಶೀಲನೆ ಪೂರ್ಣಗೊಳ್ಳುವವರೆಗೆ ದೇಶದ್ರೋಹ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸುವುದಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ಮೇ 11, ಬುಧವಾರ ಸುಪ್ರೀಂ ಕೋರ್ಟ್, ಕಾನೂನಿನ ನಿಬಂಧನೆಗಳನ್ನು ಪರಿಶೀಲಿಸುವವರೆಗೂ ದೇಶದ್ರೋಹದ ಆರೋಪಕ್ಕೆ ತಡೆ ನೀಡಿದೆ.

ಈ ಕಾನೂನಿನ ಮರುಪರೀಕ್ಷೆ ಪೂರ್ಣಗೊಳ್ಳುವವರೆಗೆ ಅದನ್ನು ಬಳಸಲಾಗುವುದಿಲ್ಲ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ಸುಪ್ರೀಂ ಕೋರ್ಟ್ ಸಿಜೆಐ ಎನ್.ವಿ.ರಮಣ ನೇತೃತ್ವದ ನ್ಯಾಯಪೀಠ ಹೇಳಿದೆ.

ದೇಶದ್ರೋಹ ಕಾನೂನು ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಕೇಂದ್ರವು ಕಾನೂನನ್ನು ಮರುಪರಿಶೀಲಿಸಲು ಕರಡು ಸಿದ್ಧಪಡಿಸಿದೆ ಎಂದು ಸುಪ್ರೀಂ ಕೋರ್ಟ್ ಗೆ ತಿಳಿಸಿದರು.

ಇದಕ್ಕೆ ಮಾನ್ಯ ಕಾರಣವಿದೆ ಎಂದು ಎಸ್ಪಿ ದರ್ಜೆಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರೆ ಮಾತ್ರ ದೇಶದ್ರೋಹದ ಆರೋಪಗಳೊಂದಿಗೆ ಎಫ್‌ಐಆರ್ ದಾಖಲಿಸಲಾಗುವುದು ಎಂದು ಕರಡು ಹೇಳುತ್ತದೆ.

ಕೇಂದ್ರವು ದೇಶದ್ರೋಹ ಕಾನೂನನ್ನು ಮರುಪರಿಶೀಲಿಸುವ ಪ್ರಕ್ರಿಯೆಯಲ್ಲಿದೆ ಎಂದು ತುಷಾರ್ ಮೆಹ್ತಾ ಮಂಗಳವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು