Categories: ದೆಹಲಿ

ದೇಶದ ರೈತರಿಗೆ ಪ್ರಧಾನಿ ಮೋದಿ ಸರ್ಕಾರದಿಂದ ಬಂಪರ್‌ ಸುದ್ದಿ!

ದೆಹಲಿ: ದೇಶದ ರೈತರಿಗೆ ಪ್ರಧಾನಿ ಮೋದಿ ಸರ್ಕಾರದಿಂದ ಬಂಪರ್‌ ಸುದ್ದಿ ಸಿಕ್ಕಿದೆ. ರಸಗೊಬ್ಬರಗಳ ಮೇಲಿನ ಸಬ್ಸಿಡಿಯನ್ನು ಹೆಚ್ಚಿಸಲು ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆ ವೇಳೆ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಇದರಿಂದಾಗಿ ರಸಗೊಬ್ಬರಗಳ ಬೆಲೆ ಏರಿಕೆಯಾಗಬಹುದೆಂಬ ಆತಂಕಕ್ಕೊಳಗಾಗಿದ್ದ ರೈತ ಸಮುದಾಯಕ್ಕೆ ಈ ಸುದ್ದಿ ನೆಮ್ಮದಿ ತಂದಿದೆ.

ಈ ಬಾರಿ ಮುಂಗಾರು ಉತ್ತಮವಾಗಿರಲಿದೆ ಎಂಬ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿತ್ತು. ಈ ಹಿನ್ನಲೆಯಲ್ಲಿ ಉತ್ತಮ ಬೆಳೆ ಬೆಳೆದು ಒಳ್ಳೆಯ ಆದಾಯ ಗಳಿಸಬಹುದೆಂಬ ಲೆಕ್ಕಾಚಾರದಲ್ಲಿದ್ದ ರೈತ ಸಮುದಾಯ ರಸಗೊಬ್ಬರಗಳ ಬೆಲೆ ಕಾರಣಕ್ಕೆ ಆತಂಕಕ್ಕೊಳಗಾಗಿತ್ತು. ಆದರೆ ಇದೀಗ ಕೇಂದ್ರ ಸರ್ಕಾರ ರಸಗೊಬ್ಬರಗಳ ಮೇಲಿನ ಸಬ್ಸಿಡಿ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳುವ ಮೂಲಕ ರೈತರ ಆತಂಕವನ್ನು ದೂರ ಮಾಡಿದೆ.

Sneha Gowda

Recent Posts

ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದಕ್ಕೆ  ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.

17 mins ago

ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ  ನೀಡಿದೆ.

34 mins ago

ಜೈಲಿನಿಂದ ಹೊರಬಂದ ಕೇಜ್ರಿವಾಲ್​ಗೆ ಆರತಿ ಬೆಳಗಿ ಸ್ವಾಗತಿಸಿದ ಕುಟುಂಬಸ್ಥರು

ಅಕ್ರಮ ಮದ್ಯ ನೀತಿ ಪ್ರಕರಣದ ಆರೋಪದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​​ ಅವರಿಗೆ ನಿನ್ನೆ ಸುಪ್ರೀಂ ಕೋರ್ಟ್…

1 hour ago

ಲೈಂಗಿಕ ದೌರ್ಜನ್ಯ ಆರೋಪ: ವಕೀಲ ದೇವರಾಜೇಗೌಡರನ್ನು ವಶಕ್ಕೆ ಪಡೆದ ಪೊಲೀಸರು

ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ವಕೀಲ ದೇವರಾಜೇಗೌಡರನ್ನು ಹಿರಿಯೂರು ಪೊಲೀಸರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳ್ ಟೋಲ್ ಬಳಿ …

1 hour ago

ನೂತನ ಆದಿ ಬಸವಮಂದಿರ ಮೂರ್ತಿ ಪ್ರತಿಷ್ಠಾನ ಮತ್ತು ಕಳಸಾರೋಹಣ ಕಾರ್ಯಕ್ರಮ

ಅಫಜಲಪುರ ತಾಲೂಕಿನ ಆನೂರ ಗ್ರಾಮದ ಆದಿ ಬಸವೇಶ್ವರ ನೂತನ ಕಳಸಾರೋಹಣ ಮತ್ತು ನೂತನ ಮಂದಿರ ಉದ್ಘಾಟನಾ ಕಾರ್ಯಕ್ರಮ ಹನ್ನೊಂದು ಮಠಗಳ…

2 hours ago

ಎಸ್ಎಸ್ಎಲ್ ಸಿ ಬಾಲಕಿಯ ಹತ್ಯೆ ಪ್ರಕರಣ: ಆರೋಪಿಯ ಬಂಧನ

ಎಸ್ಎಸ್ಎಲ್ ಸಿ ಬಾಲಕಿಯ ರುಂಡ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋವಿ ಹಿಡಿದು ಕಾಡಿನಲ್ಲಿ ತಲೆಮರಿಸಿಕೊಂಡಿದ್ದ ಆರೋಪಿ ಪ್ರಕಾಶನನ್ನ ಪೊಲೀಸರು ಬಂಧಿಸಿದ್ದಾರೆ. 

2 hours ago