ನವದೆಹಲಿ: ದೇಶಾದ್ಯಂತ ನಡೆಯುತ್ತಿರುವ ರಾಷ್ಟ್ರೀಯ ಲಸಿಕಾ ಅಭಿಯಾನದಡಿ ಇದುವರೆಗೆ, 97 ಕೋಟಿ 23 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಕೋವಿಡ್ ಲಸಿಕೆ ನೀಡಲಾಗಿದ್ದು, ನಿನ್ನೆ ಒಂದೇ ದಿನ 8 ಲಕ್ಷ 36 ಸಾವಿರಕ್ಕೂ ಅಧಿಕ ಮಂದಿ ಲಸಿಕೆ ಡೋಸ್ಗಳನ್ನು ಪಡೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ, 17 ಸಾವಿರದ 861 ಸೋಂಕಿತರು ಗುಣಮುಖರಾಗಿದ್ದು, ಪ್ರಸ್ತುತ ದೇಶದ ಕೋವಿಡ್ ಚೇತರಿಕೆ ಪ್ರಮಾಣ ಶೇಕಡ 98. 08ರಷ್ಟಿದ್ದು, ಇದು ಕಳೆದ ಮಾರ್ಚ್ನಿಂದ ದಾಖಲಾಗಿರುವ ಅತ್ಯಧಿಕ ಚೇತರಿಕೆ ಪ್ರಮಾಣವಾಗಿದೆ. ಈವರೆಗೆ, ಸುಮಾರು ಮೂರು ಕೋಟಿ 33 ಲಕ್ಷ 99 ಸಾವಿರದ 961 ಮಂದಿ ಚೇತರಿಸಿಕೊಂಡಿದ್ದಾರೆ.
ನಿನ್ನೆ 15 ಸಾವಿರದ 981ಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿದ್ದು, ಇದು ಕಳೆದ ಎಂಟು ದಿನಗಳಿಂದ 20 ಸಾವಿರಕ್ಕಿಂತ ಕಡಿಮೆ ಇದೆ. ಪ್ರಸ್ತುತ ದೇಶದಲ್ಲಿ ಅಂದಾಜು ಎರಡು ಲಕ್ಷ 1 ಸಾವಿರದ 632 ಪ್ರಕರಣಗಳು ಸಕ್ರಿಯವಾಗಿವೆ. ಇದು ವರದಿಯಾದ ಒಟ್ಟು ಪ್ರಕರಣಗಳ ಶೇಕಡ ಒಂದಕ್ಕಿಂತ ಕಡಿಮೆ ಅಂದರೆ ಶೇಕಡ 0.59 ರಷ್ಟಿದ್ದು, ಇದು ಕಳೆದ ಮಾರ್ಚ್ನಿಂದ ದಾಖಲಾದ ಅತ್ಯಂತ ಕಡಿಮೆ ಪ್ರಮಾಣವಾಗಿದೆ
ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…
ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.