ನವದೆಹಲಿ : ದೆಹಲಿ ಪೊಲೀಸರು ವೈದ್ಯರ ಮೇಲೆ ನಡೆಸಿದ ದೌರ್ಜನ್ಯವನ್ನು ವಿರೋಧಿಸಿ ಡಿಸೆಂಬರ್ 29ರಂದು ಬೆಳಿಗ್ಗೆ 8 ರಿಂದ ದೇಶಾದ್ಯಂತ ಎಲ್ಲ ಆರೋಗ್ಯ ಸೇವೆಗಳಿಂದ ಸಂಪೂರ್ಣ ಹಿಂತೆಗೆದುಕೊಳ್ಳುವಂತೆ ಫೆಡರೇಷನ್ ಆಫ್ ಆಲ್ ಇಂಡಿಯಾ ಮೆಡಿಕಲ್ ಅಸೋಸಿಯೇಷನ್ ಕರೆ ನೀಡಿದೆ ಎಂದು ತಿಳಿದು ಬಂದಿದೆ.
ವೈದ್ಯರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಯ ಸಮಯದಲ್ಲಿ ಮಹಿಳಾ ವೈದ್ಯರನ್ನು ಪುರುಷ ಪೊಲೀಸ್ ಸಿಬ್ಬಂದಿ ಕ್ರೂರವಾಗಿ ಥಳಿಸಿ ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ಎಫ್ಎಐಎಂಎ ತಿಳಿಸಿದೆ.
ಇನ್ನು ನೀಟ್-ಪಿಜಿ 2021 ಕೌನ್ಸೆಲಿಂಗ್ ವಿಳಂಬದ ಬಗ್ಗೆ ದೆಹಲಿಯಲ್ಲಿ ಹೆಚ್ಚಿನ ಸಂಖ್ಯೆಯ ನಿವಾಸಿ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದು, ಸೋಮವಾರ ರಸ್ತೆಯಲ್ಲಿ ಪೊಲೀಸರು ಮತ್ತು ವೈದ್ಯರ ನಡುವೆ ಘರ್ಷಣೆ ನಡೆದಿದೆ. ಅನೇಕ ಜನರು ಬೀದಿ ಬದಿಯಲ್ಲಿ ಗಾಯಗೊಂಡಿದ್ದರು ಎಂದು ಹೇಳಿದೆ.
ಪೊಲೀಸರ ಈ ದೌರ್ಜನ್ಯವನ್ನು ಖಂಡಿಸಿ ದೇಶಾದ್ಯಂತ ಡಿಸೆಂಬರ್ 29 ರಂದು ಎಲ್ಲಾ ಆರೋಗ್ಯ ಸೇವೆಗಳನ್ನು ಸಂಪೂರ್ಣ ಹಿಂತೆಗೆದುಕೊಳ್ಳಲಾಗುವುದು ಎಂದು ಕರೆ ನೀಡಿದೆ.
ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್…
ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…
ಮದ್ಯ ಸೇವನೆಗೆಂದು ಕರೆದೊಯ್ದು ಕೊಲೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ. ಆದ್ರೆ ನೆಲದ ಕಾನೂನು ವ್ಯಾಪ್ತಿಯಲ್ಲಿ ಏನೇನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ.…
ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಎಥಿಲಿನ್ ಆಕ್ಸೈಡ್ ಪ್ರಮಾಣ ಹೆಚ್ಚಾಗಿರುವುದರಿಂದ ಇದನ್ನು ಬಳಸದಂತೆ ಅಧಿಕಾರಿಗಳಿಂದ ಉತ್ತರ ಕನ್ನಡ ಜಿಲ್ಲೆ ಆಹಾರ ಸುರಕ್ಷತಾ…