ನವದೆಹಲಿ: ಭಾರತದಾದ್ಯಂತ ಮಾರ್ಚ್ ವೇಳೆಗೆ ಕೊರೊನಾ ಸೋಂಕಿತ ಪ್ರಕರಣಗಳು ಇಳಿಮುಖವಾಗುವ ಸಾಧ್ಯತೆ ಇದೆ ಎಂದು ಐಸಿಎಂಆರ್ ತಿಳಿಸಿದೆ.
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಉನ್ನತಾಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ದೇಶದ ಕೆಲವು ಭಾಗಗಳಲ್ಲಿ ಈ ತಿಂಗಳ ಅಂತ್ಯದ ವೇಳೆಗೆ ಮೂರನೇ ಅಲೆಯು ಕ್ಷೀಣಿಸುವ ಸಾಧ್ಯತೆ ಇದೆ ಎಂದಿದ್ದಾರೆ.
ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳು ಈಗಾಗಲೇ ಸಕ್ರಿಯ ಪ್ರಕರಣಗಳು ಇಳಿದಿರುವ ಕುರಿತು ಮಾಹಿತಿ ನೀಡಿವೆ.
ಇನ್ನೂ ಕೆಲವು ರಾಜ್ಯಗಳಲ್ಲಿ ಪ್ರಕರಣಗಳು ಏರುಗತಿಯತ್ತ ಸಾಗುತ್ತಿವೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 14.35 ಲಕ್ಷ ದಷ್ಟಿದೆ.ಮಹಾರಾಷ್ಟ್ರ, ದೆಹಲಿ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು ಅತ್ಯಂತ ಗರಿಷ್ಠ ಮಟ್ಟದ ಪ್ರಕರಣಗಳನ್ನು ಎದುರಿಸಿ ಇದೀಗ ಕೆಳಗಿಳಿಯುತ್ತಿವೆ. ಕೊರೊನಾ ಸೋಂಕಿನ ಮೂರನೇ ಅಲೆಯಿಂದ ಮಾರ್ಚ್ನ ಎರಡು ಹಾಗೂ ಮೂರನೇ ವಾರದ ವೇಳೆಗೆ ಹೊರಬರಬಹುದು ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪೆ ಅಭಿಪ್ರಾಯಪಟ್ಟಿದ್ದಾರೆ.
ಒಂದು ದಿನದಲ್ಲಿ ಮೂರು ಲಕ್ಷದವರೆಗಿನ ಪ್ರಕರಣಗಳು ಪತ್ತೆಯಾಗಿ ಇದೀಗ ಮತ್ತೆ ಇಳಿಮುಖಗೊಂಡಿದೆ. ದಿನಕ್ಕೆ ಒಂದು ಲಕ್ಷದಷ್ಟು ಸೋಂಕಿತರು ದಾಖಲಾಗುತ್ತಿದ್ದಾರೆ. ಆದರೆ ಈ ಮೂರನೇ ಅಲೆ ಇದೊಂದು ತಿಂಗಳು ಕಾಡಲಿದೆ. ಭಾರತದಲ್ಲಿ ಮಾರ್ಚ್ ತಿಂಗಳ ಹೊತ್ತಿಗೆ ಕೊವಿಡ್ 19 ಮೂರನೇ ಅಲೆ ಪ್ರಮಾಣ ತುಸು ತಗ್ಗಬಹುದು ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಮಧ್ಯೆ ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಕೂಡ ಕೊರೊನಾ ಸಕ್ರಿಯ ಪ್ರಕರಣಗಳು ಕಡಿಮೆ ಆಗಿವೆ.