News Karnataka Kannada
Monday, April 29 2024
ದೆಹಲಿ

ನಕ್ಸಲ್ ಸಂಪರ್ಕದ ಆರೋಪಿ ವಿದ್ಯಾರ್ಥಿಗೆ ಸುಪ್ರೀಂಕೋರ್ಟ್‍ನಿಂದ ಜಾಮೀನು

Supreem Mai Newsk 3834246588
Photo Credit :

ನವದೆಹಲಿ: ನಕ್ಸಲರ ಜೊತೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಬಂಧಿತನಾಗಿದ್ದ ವಿದ್ಯಾರ್ಥಿಗೆ ಸುಪ್ರೀಂಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ. ಕೇಂದ್ರ ರಾಷ್ಟ್ರೀಯ ತನಿಖಾ ದಳ 2019ರ ನವೆಂಬರ್ 2ರಂದು ಪತ್ರಿಕೋದ್ಯಮದ ವಿದ್ಯಾರ್ಥಿ ಥವಾಹ್ ಫಾಸಲ್ ಮತ್ತು ಕಾನೂನು ವಿದ್ಯಾರ್ಥಿ ಅಲ್ಲನ್ ಸೋಯೆಬ್‍ರನ್ನು ಕಾಜಿಕೋಡದಲ್ಲಿ ಬಂಧಿಸಿ, ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಯುಎಪಿಎ) ಅಡಿ ಪ್ರಕರಣ ದಾಖಲಿಸಿತ್ತು.

ಈ ಆದೇಶಗಳನ್ನು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನಿಸಿತ್ತು. ಆ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಎಸ್.ಎಸ್.ಒಕಾ ಅವರನ್ನು ಒಳಗೊಂಡ ವಿಭಾಗೀಯ ಪೀಠ ವಿಚಾರಣೆಗೆ ನಡೆಸಿ ಸೆ.23ರಂದುತೀರ್ಪನ್ನು ಕಾಯ್ದಿರಿಸಿತ್ತು.

ಫಾಸಲ್‍ಗೆ ಜಾಮೀನು ನಿರಾಕರಿಸಿದ ಆದೇಶವನ್ನು ಸರ್ವೋಚ್ಛ ನ್ಯಾಯಾಲಯ ಬದಿಗೆ ಸರಿಸಿದೆ. ಈ ಮೂಲಕ ಬಂಧಿತ ಇಬ್ಬರು ವಿದ್ಯಾರ್ಥಿಗಳಿಗೂ ಜಾಮೀನು ದೊರೆತಂತಾಗಿದೆ.

ಸಿಪಿಐ (ಎಂ) ಸದಸ್ಯರಾಗಿದ್ದ ಆರೋಪಿಗಳಿಂದ ಆಕ್ಷೇಪಾರ್ಹ ಸಾಹಿತ್ಯವನ್ನು ವಶ ಪಡಿಸಿಕೊಳ್ಳಲಾಗಿತ್ತು. ಎನ್‍ಐಎ ಕಾರ್ಯಾಚರಣೆಯ ಬಳಿಕ ಪಕ್ಷದಿಂದ ಇಬ್ಬರನ್ನು ವಜಾಗೊಳಿಸಲಾಗಿತ್ತು. ಸೋಯಬ್‍ಗೆ ಆತನ ವಯಸ್ಸು ಮತ್ತು ಆರೋಗ್ಯವನ್ನು ಗಮನದಲ್ಲಿ ಇರಿಸಿಕೊಂಡು ವಿಚಾರಣಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು, ಹೈಕೋರ್ಟ್ ಅದನ್ನು ಮಾನ್ಯ ಮಾಡಿತ್ತು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು