ನವದೆಹಲಿ: ದೆಹಲಿ ಪ್ರದೇಶ ಹೊರತುಪಡಿಸಿ ಪ್ರಮುಖ ಮೆಟ್ರೋ ನಗರಗಳಲ್ಲಿ ಟೊಮೆಟೋ ಚಿಲ್ಲರೆ ಬೆಲೆ ಪ್ರತಿ ಕೆಜಿಗೆ 77 ರೂಪಾಯಿಗಳ ಗರಿಷ್ಠ ಮಟ್ಟವನ್ನು ತಲುಪಿದೆ. ಸರ್ಕಾರದ ಅಂಕಿ ಅಂಶಗಳ ಪ್ರಕಾರ ಸರಕುಗಳ ಮಿತವಾದ ಪೂರೈಕೆಯಿಂದಾಗಿ ಬೆಲೆಗಳು ಒಂದು ತಿಂಗಳ ಹಿಂದಿನ ಅವಧಿಗಿಂತ ಹೆಚ್ಚಾಗಿದ್ದು, ಸಾಮಾನ್ಯ ಜನರು ಖರೀದಿ ಮಾಡಲು ಹಿಂದೇಟು ಹಾಕಿ ತಲೆ ಮೇಲೆ ಕೈಹೊತ್ತಿದ್ದಾರೆ.
ಆದಾಗ್ಯೂ ಎಲ್ಲಾ ಪ್ರಮುಖ ಟೊಮೆಟೋ ಬೆಳೆಯುವ ಪ್ರದೇಶಗಳಲ್ಲಿ ಮಾರುಕಟ್ಟೆಗೆ ಪ್ರವೇಶಿಸಿದ ನಂತರ ಜುಲೈನಲ್ಲಿ ಟೊಮೆಟೋ ಬೆಲೆಗಳು ತೀವ್ರ ಕುಸಿತವನ್ನು ಕಾಣುವ ನಿರೀಕ್ಷೆಯಿದೆ. ಗ್ರಾಹಕ ವ್ಯವಹಾರಗಳ ದತ್ತಾಂಶ ಇಲಾಖೆಯ ವರದಿಗಳ ಪ್ರಕಾರ ಪ್ರಮುಖ ನಗರಗಳಲ್ಲಿ ಟೊಮೆಟೊ ಸರಾಸರಿ ಬೆಲೆಗಳು ಕೆಜಿಗೆ 55 ರಿಂದ 60 ರೂ. ಆಗಿದೆ. ಕೃಷಿ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ಹಿಂದಿನ ವರ್ಷಕ್ಕೆ ಹೋಲಿಸಿದರೆ 2021-22 ಬೆಳೆ ವರ್ಷದಲ್ಲಿ (ಜುಲೈ-ಜೂನ್) 20.3 ಮಿಲಿಯನ್ ಟನ್ಗಳಿಗೆ (ಎಂಟಿ) ಟೊಮೆಟೋ ಉತ್ಪಾದನೆಯು 4% ಕ್ಕಿಂತ ಹೆಚ್ಚು ಕುಸಿಯುವ ನಿರೀಕ್ಷೆಯಿದೆ ಎಂದು ಅಂದಾಜಿಸಲಾಗಿದೆ.
ಹಠಾತ್ ಬೆಲೆ ಏರಿಕೆ :
ಪ್ರಮುಖ ಉತ್ಪಾದನಾ ರಾಜ್ಯಗಳಾದ ಆಂಧ್ರಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿ ಚಿಲ್ಲರೆ ಬೆಲೆಗಳು ಗಮನಾರ್ಹವಾಗಿ ಏರಿವೆ. ಮಾಹಿತಿ ಪ್ರಕಾರ ವಿವಿಧ ನಗರಗಳಲ್ಲಿ ಕೆಜಿಗೆ 50 ರಿಂದ 100 ರೂ. ಆಂಧ್ರಪ್ರದೇಶ ಮತ್ತು ಕರ್ನಾಟಕದಂತಹ ಪ್ರಮುಖ ಬೆಳೆಯುತ್ತಿರುವ ರಾಜ್ಯಗಳಿಂದ ಪೂರೈಕೆ ಮಿತವಾಗಿರುವುದೇ ಚಿಲ್ಲರೆ ಬೆಲೆಗಳ ಏರಿಕೆಗೆ ಕಾರಣ ಎಂದು ವ್ಯಾಪಾರಿಗಳು ಮತ್ತು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.
ಟೊಮೇಟೊದ ಸರಾಸರಿ ಅಖಿಲ ಭಾರತ ಚಿಲ್ಲರೆ ಬೆಲೆಯು ತಿಂಗಳ ಹಿಂದಿನ ಅವಧಿಯಲ್ಲಿ ಪ್ರತಿ ಕೆಜಿಗೆ ರೂ 29.5 ರಿಂದ ಬುಧವಾರದಂದು ಪ್ರತಿ ಕೆಜಿಗೆ ರೂ 52.30 ಕ್ಕೆ 77 ರಷ್ಟು ಹೆಚ್ಚಳ ಕಂಡು ಬಂದಿದೆ.
ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…
ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.
ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…
ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು…
ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ…
ತೆಲುಗು ಸಿನಿಮಾ ಹಾಗೂ ಕಿರುತೆರೆಯಲ್ಲಿ ಅಭಿನಯಿಸಿದ ಬಹಳಷ್ಟು ಕನ್ನಡಿಗರು ಸಕ್ಸಸ್ ಕಂಡಿದ್ದಾರೆ. ತೆಲುಗು ಕಿರುತೆರೆಯಲ್ಲಿ ಕರ್ನಾಟಕದ ಕಲಾವಿದರಿಗೆ ಸಾಕಷ್ಟು ಬೇಡಿಕೆಯೂ…